This is the title of the web page
This is the title of the web page
Politics News

9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ : ಸಿಎಂ


K2 ಪೊಲಿಟಿಕಲ್ ನ್ಯೂಸ್ : ಎಸ್ ಸಿ ಎಸ್ ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳವನ್ನು9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಗಮೋಹನ್ ದಾಸ್ ವರದಿಯಂತೆ ತುಳಿತಕ್ಕೊಳಗಾಗಿರುವ ಸಮಾಜದವರ ಪರವಾಗಿ ನ್ಯಾಯ ನೀಡಲಾಗಿದೆ. ಎಸ್ ಸಿ ವರ್ಗಕ್ಕೆ ಶೇ. 15 ರಿಂದ ಶೇ. 17 ಮತ್ತು ಎಸ್ ಟಿ ಗೆ 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ತಳಸಮುದಾಯದ ಯುವಜನತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಈ ಹೆಚ್ಚಳಕ್ಕೆ ಕಾನೂನಿನ ರಕ್ಷಣೆಯನ್ನು ಈಗಾಗಲೇ ಸರ್ಕಾರ ನೀಡಿದೆ.. ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಮೀಸಲಾತಿ ಹೆಚ್ಚಳವನ್ನು ಸರ್ಕಾರ ಈಗಾಗಲೇ ಜಾರಿ ಮಾಡಿದ್ದು, ಸರ್ಕಾರದ ನೇಮಕಾತಿಗಳಲ್ಲಿ ಈ ನಿಯಮವನ್ನು ಈಗಾಗಲೇ ಪಾಲಿಸಲಾಗುತ್ತಿದೆ ಎಂದರು.

ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಪ್ರತ್ಯೇಕ ಸಚಿವಾಲಯ : ನಾನು ಬಯಸಿ ಮುಖ್ಯಮಂತ್ರಿಯಾದವನಲ್ಲ. ನಮ್ಮನಾಯಕರು ಹಾಗೂ ಜನರಿಂದ ಈ ಆಶೀರ್ವಾದ ನನಗೆ ದೊರೆಯಿತು. ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. 75 ಯೂನಿಟ್ ಉಚಿತ ವಿದ್ಯುತ್ , ಸಮುದಾಯದ ರೈತರಿಗೆ ಜಮೀನು ಖರೀದಿಗೆ 25 ಲಕ್ಷದವರೆಗೆ ಅನುದಾನ, ಮನೆ ನಿರ್ಮಾಣಕ್ಕೆ 2 ಲಕ್ಷ, ಹಾಸ್ಟೆಲ್ ಗಳ ಹೆಚ್ಚಳ ಮಾಡಲಾಗಿದೆ. ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಸಹಕಾರ ನೀಡಲಾಗುತ್ತಿದೆ. ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ ಶ್ರೀಮತಿ ದ್ರೌಪದಿ ಮುರ್ಮು ಅವರು ಗೌರವಾನ್ವಿತ ರಾಷ್ಟ್ರಪತಿಗಳಾಗಿದ್ದಾರೆ. ಸಮುದಾಯದ ಜನನಾಯಕರಿಗೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನಗಳನ್ನು ನೀಡಲಾಗಿದೆ ಎಂದರು.

ತಳ ಸಮುದಾಯ ಸದೃಢವಾದರೆ ನಾಡು ಸದೃಢವಾದಂತೆ : ವಿಜಯನಗರ ಸಾಮ್ರಾಜ್ಯವನ್ನು ರಕ್ಷಣೆ ಮಾಡುವಲ್ಲಿ ವಾಲ್ಮೀಕಿ ಸಮಾಜ ಮಹತ್ವ ಪಾತ್ರ ವಹಿಸಿದೆ. ಮದಕರಿ ನಾಯಕ, ರಾಜ್ಯದ ಇತಿಹಾಸದಲ್ಲಿ ಪ್ರಮುಖರು. ವಾಲ್ಮೀಕಿ ರಚಿಸಿರುವ ರಾಮಾಯಣ ಜಗತ್ತಿನ 10 ಶ್ರೇಷ್ಠ ಗ್ರಂಥಗಳಲ್ಲಿ ಒಂದು. ಮನುಷ್ಯ ಸಂಬಂಧಗಳನ್ನು ಉತ್ತಮವಾಗಿ ಅತ್ಯುತ್ತಮವಾಗಿ ಬಿಂಬಿಸಿ, ದುಷ್ಟಶಕ್ತಿಗಳನ್ನು ಸಂಹರಿಸುವ ಪರಿಯನ್ನು ತೋರಿದ್ದಾರೆ. ವೀರ ಸಿಂಧೂರ ಲಕ್ಷ್ಮಣ, ಬೇಡರ ಕಣ್ಣಪ್ಪ ಈ ಸಮುದಾಯದವರೇ. ತಳಸಮುದಾಯವನ್ನು ಸದೃಢಗೊಳಿಸಿದರೆ , ನಾಡು ಸದೃಢಗೊಳಿಸಿದಂತೆ ಎಂದರು.

ಸಮುದಾಯದವರು ಸಂಘಟಿತರಾಗಬೇಕು : ಗುರುಪೀಠದ ಶ್ರೀಗುರುಗಳೊಂದಿಗೆ ಭಕ್ತಿಭಾವದ ಸಂಬಂಧವಿದೆ. ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅರ್ಥಪೂರ್ಣವಾಗಿ ನಡೆಯುತ್ತಿರುವುದು ಸಂತೋಷದ ವಿಷಯ. ವಾಲ್ಮೀಕಿ ಸಮುದಾಯದವರು ಸಂಘಟಿತರಾಗಿರುತ್ತೇವೆ ಎಂಬ ಸಂಕಲ್ಪ ಮಾಡಬೇಕಿದೆ. ತಮ್ಮ ಹಕ್ಕುಗಳನ್ನು ಪಡೆಯುವ ಸಂಕಲ್ಪ ಮಾಡಬೇಕಿದೆ. ಶ್ರೀ ಸುದೀಪ್ ಅವರನ್ನು ನಾನು ಹತ್ತಿರದಿಂದ ಬಲ್ಲೆ. ಅವರು ಕರ್ನಾಟಕದ ಎಲ್ಲರ ಹೃದಯದಲ್ಲಿ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ಸಂಗತಿ. ಈ ಸಮುದಾಯದ ಯುವಕರ ಆಶಾಕಿರಣವಾಗಿದ್ದಾರೆ ಎಂದರು.


[ays_poll id=3]