This is the title of the web page
This is the title of the web page
Crime NewsLocal News

ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಪ್ರಕರಣ ದೂರು ನೀಡಿದ ಪುತ್ರ, ತನಿಖೆ ಆರಂಭ


ರಾಯಚೂರು : ಹಟ್ಟಿ ಚಿನ್ನದ ಗಣಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಸಹೋದರ ಆತ್ಮಹತ್ಯೆ ಎಂದು ದೂರು ನೀಡಿದ್ದನು. ಆದರೆ, ತನ್ನ ತಾಯಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತಳ ಮಗ ಕೊಲೆ ಎಂದು ದೂರು ನೀಡಿದ್ದಾನೆ. ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ ಬರಲು ಕಾರಣ ಏನು ಗೊತ್ತಾ..?

ಹೌದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ 45 ವರ್ಷದ ಮಂಜುಳಾ ಅವರ ದೇಹ ಬೆಂಕಿ ಹೊತ್ತಿಕೊಂಡು ಉರಿಯುತ್ತಿತ್ತು. ಆದ್ರೆ ಸಾವಿಗೂ ಮುನ್ನ ಮಂಜುಳಾ, ಬ್ಯಾಂಕ್​ನಿಂದ‌ ಪಡೆದ 10 ಲಕ್ಷ ಸಾಲದ ಹಣವನ್ನು ವಿತ್ ಡ್ರಾ ಮಾಡಿ ಮನೆಯಲ್ಲಿಟ್ಟಿದ್ದರು. ಆದರೆ, ಈ ಹಣ ಮತ್ತು ಮನೆಯಲ್ಲಿದ್ದ ಅಪಾರ ಚಿನ್ನಾಭರಣ ನಾಪತ್ತೆಯಾಗಿದೆ. ಯಾರೋ ಪರಿಚಯಸ್ಥರು ಬ್ಲ್ಯಾಕ್ ಮೇಲ್ ಮಾಡಿ ಹಣ, ಚಿನ್ನ ಲೂಟಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮಂಜುಳ ಮಗ ಸಚಿನ್ ದೂರು ನೀಡಿದ್ದಾನೆ.

ಪೆಟ್ರೋಲ್ ಹಾಗೂ ಕೆಮಿಕಲ್​ನಿಂದ ಬೆಂಕಿ ಹಚ್ಚಿ ಕೊಲೆಗೈದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿದ ಹಟ್ಟಿ ಠಾಣಾ ಪೊಲೀಸರು, ಎಫ್​​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಂಜುಳ ಕೊನೆಯದಾಗಿ ಯಾರಿಗೆ ದೂರವಾಣಿ ಕರೆ ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದರ ಜೊತೆಗೆ ಮೃತಳ ಬ್ಯಾಂಕ್ ಡಿಟೇಲ್ಸ್ ಪಡೆಯಲು ಮುಂದಾಗಿದ್ದಾರೆ.


[ays_poll id=3]