This is the title of the web page
This is the title of the web page
Crime News

ಅರ್ಧಕ್ಕೆ ಹೆರಿಗೆ ಬಿಟ್ಟ RMP ವೈದ್ಯ ಗರ್ಭಿಣಿ ಸಾವು


K2 ನ್ಯೂಸ್ ಡೆಸ್ಕ್ : ಆರ್‌ಎಂಪಿ ವೈದ್ಯನ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ ಘಟನೆ ನಿಪ್ಪಾಣಿ ತಾಲೂಕಿನಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೇಜಲ್‌ ಅನಿಕೇತ್‌ ಮಾಳಿ (22) ಮೃತ ಗರ್ಭಿಣಿ. ಆರ್‌ಎಂಪಿ ವೈದ್ಯ ಮಹಾವೀರ್‌ ಬಂಕಾಪುರೆ ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಗರ್ಭಿಣಿ ಶೇಜಲ್‌ ಹೆರಿಗೆಗೆಂದು ಬಂಕಾಪುರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈ ವೇಳೆ ಶೇಜಲ್‌ ಸ್ಥಿತಿ ಚಿಂತಾಜನಕವಾಗಿದೆ. ಇದರಿಂದಾಗಿ ಹೆರಿಗೆಯನ್ನು ಅರ್ಧಕ್ಕೆ ಬಿಟ್ಟ ವೈದ್ಯ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ.

ಇದರಿಂದಾಗಿ ಶೇಜಲ್‌ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿ ವೈದ್ಯನ ಮನೆ ಎದುರು ಮೃತ ಗರ್ಭಿಣಿಯ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು. ಘಟನೆ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.


[ays_poll id=3]