This is the title of the web page
This is the title of the web page
Crime NewsState NewsVideo News

ರೈಲು ಬೋಗಿಗೆ ನೇಣು ಬಿಗಿದುಕೊಂಡು ಸಿಬ್ಬಂದಿ ಆತ್ಮಹತ್ಯೆ..


ರೈಲು ಬೋಗಿಗೆ ನೇಣು ಬಿಗಿದುಕೊಂಡು ಸಿಬ್ಬಂದಿ ಆತ್ಮಹತ್ಯೆ..

K2 ಕ್ರೈಂ ನ್ಯೂಸ್ : ರೈಲ್ವೆ ಜಂಕ್ಷನ್(Railway jankshan) ನಲ್ಲಿ ನಿಲ್ಲಿಸಲಾಗಿದ್ದ ರೈಲ್ವೆ ಬೋಗಿಗೆ ರೈಲ್ವೆ ಸಿಬ್ಬಂದಿ ನೇಣು(suicide) ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್‍ನಲ್ಲಿ ನಡೆದಿದೆ.

ಕಲಬುರ್ಗಿ(kalburgi) ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ(wadi) ರೈಲ್ವೆ ಜಂಕ್ಷನ್ ನಲ್ಲಿ ಘಟನೆ ಜರುಗಿದೆ. ಸೋಲಾಪುರ ನಗರದ ನಿವಾಸಿ ಮಲ್ಲಿನಾಥ ಸಿದ್ದಪ್ಪ ದೋಶೆಟ್ಟಿ(38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಮಲ್ಲಿನಾಥmallinatha) ವಾಡಿ ರೈಲ್ವೆಯ ಎಸ್‍ಎನ್‍ಟಿ(SNT) ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳಿಂದ ಕೆಲಸಕ್ಕೆ ಗೈರು ಹಾಜರಾಗಿದ್ದ ಮಲ್ಲಿನಾಥ ಕಾಣೆಯಾಗಿದ್ದ. ಈ ಬಗ್ಗೆ ಮನೆಯವರು ಅ.17 ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ, ರಾಯಚೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಾಡಿ ಪೊಲೀಸ್ ಠಾಣೆಗೆ ಕರೆತಂದು ಪೋಷಕರಿಗೆ ಒಪ್ಪಿಸಿದ್ದರು.

ಇಂದು ಬೆಳಿಗ್ಗೆ ವಾಡಿ ರೈಲ್ವೆ ಪ್ಲಾಟ್ ಫಾರ್ಮ್-1ರಲ್ಲಿ ಕರ್ಮಚಾರಿ ರೈಲು ಬೋಗಿಗೆ ಮಲ್ಲಿನಾಥ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ರೈಲ್ವೆ ಇಲಾಖೆಯ ಪಿಎಸ್‍ಐ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಡಿ ಪೊಲೀಸ್(WADI POLICE) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


[ays_poll id=3]