This is the title of the web page
This is the title of the web page
State News

ಬಿಜೆಪಿಯಿಂದ ರಾಜ್ಯಕ್ಕೆ ಅವಮಾನ.. ಸಿದ್ದು, ಡಿಕೆಶಿ ಅಸಮಾಧಾನ..


K2 ನ್ಯೂಸ್ ಡೆಸ್ಕ್ : ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪರೇಡಿನಲ್ಲಿ ಕರ್ನಾಟಕದ ನಾರಾಯಣ ಗುರೂಜಿ ಅವರ ಸ್ತಂದ ಚಿತ್ರವನ್ನು ನಿರಾಕರಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ರಾಜ್ಯಕ್ಕೆ ಅವಮಾನ ಮಾಡಿದಂತೆ ಎಂದಿದ್ದಾರೆ.

ಸಿದ್ದರಾಮಯ್ಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಬಿಜೆಪಿ ಸರ್ಕಾರ ಅವಕಾಶ ನಿರಾಕರಿಸಿರುವುದು ಕರ್ನಾಟಕಕ್ಕೆ ಮಾಡಿರುವ ಅವಮಾನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಎದುರು. ಇನ್ನು ಕೆಪಿಸಿಸಿ ಡಿಕೆ ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು ನಾರಾಯಣ ಗುರು ಅವರ ಸ್ತಬ್ಧಚಿತ್ರ ನಿರಾಕರಿಸಿದ್ದು ಮಂಗಳೂರು ಭಾಗದ ಜನ ಮತ್ತು ರಾಜ್ಯದ ಜನರಿಗೆ ಅಪಮಾನ ಮಾಡಿದಂತೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಂಡಲೀಕರಂತೆ ವರ್ತಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು ರಾಜ್ಯದ ಘನತೆ-ಗೌರವಗಳನ್ನು ದೆಹಲಿ ನಾಯಕರಿಗೆ ಅಡವಿಟ್ಟಿರುವುದು ದುರದೃಷ್ಟ. ರಾಜ್ಯದ ಗೌರವದ ಪ್ರಶ್ನೆ ಬಂದಾಗ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ ಎಂದು ಕಿಡಿಕಾರಿದ್ದಾರೆ.


[ays_poll id=3]