K2 ಕ್ರೈಂ ನ್ಯೂಸ್ : ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ, ಪರೀಕ್ಷೆ ಬರೆಯುತ್ತಿದ್ದ ವೇಳೆ ಕಾಲೇಜಿನಿಂದ ನಾಲ್ಕು ಜನ ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಅ.11 ರಂದು ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದಗಯಾರ್ಥಿನಿ ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಬಿಕಾಂ ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ನಿಮ್ಮ ಅಣ್ಣ ಕರೆಯುತ್ತಿದ್ದಾನೆ ಎಂದು ಸುಳ್ಳು ಹೇಳಿ ಹೊರಗೆ ಕರೆಸಿಕೊಂಡಿದ್ದು, ಆರೋಪಿಗಳು ಆಕೆಯನ್ನು ಅಪಹರಿಸಿ ಕೊಪ್ಪಳದ ಸಾಣಾಪುರದಲ್ಲಿರುವ ಹೊಟೆಲ್ ಒಂದಕ್ಕೆ ಕರೆದೊಯ್ದಿದ್ದರು. ಬಳಿಕ ಸತತವಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.
ದೂರಿನನ್ವಯ ಪೊಲೀಸರು ಕೌಲ್ ಬಜಾರ್ ನವೀನ್, ಸಾಕೀಬ್, ತನು ಮತ್ತೊಬ್ಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಮೊದಲ ಆರೋಪಿ ನವೀನ್ನನ್ನು ಬಂಧಿಸಿದ್ದಾರೆ. ಮಿಕ್ಕ ಆರೋಪಿಗಳಿಗಾಗಿ ಜಾಲ ಬೀಸಿದ್ದಾರೆ.
[ays_poll id=3]