K2kannadanews.in
Local news ರಾಯಚೂರು : ಬೆಳ್ಳಂಬೆಳಗ್ಗೆ ರಾಯಚೂರು ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಕೆರೆ ಅಂತ ಆಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿ ಮಹಾನಗರ ಪಾಲಿಕೆಯ ವಿರುದ್ಧ ಹಿಡಿ ಶಾಪ ಹೊರ ಹಾಕಿದ್ದಾರೆ.
ಅದು ರಾಯಚೂರು ನಗರದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಆಶಾಪುರ ಕ್ರಾಸ್ ಬಳಿ ಇರುವಂತಹ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ಚರಂಡಿ ಸ್ವಚ್ಛತೆ ಮಾಡದಿರುವ ಹಿನ್ನೆಲೆಯಲ್ಲಿ ಚರಂಡಿ ನೀರು ರಸ್ತೆಯ ಮೇಲೆ ನಿಂತು ಕೆರೆಯಂತೆ ಹಾಕಿ ವಾಹನ ಸವಾರರು ಸಂಚರಿಸಲು ಪರದಾಡುವ ಪರಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಬೆಳ್ಳಂ ಬೆಳಗ್ಗೆ ಚರಂಡಿ ನೀರಿನಲ್ಲಿ ಹೋಗಬೇಕು ಎಂಬ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ನಿರ್ಲಕ್ಷಕ್ಕೆ ವಾಹನ ಸವಾರರು ಹಿಡಿ ಶಾಪ ಹಾಕಿ ಮುಂದೆ ಸಾಕಿದ ಘಟನೆ ಜರುಗಿತು.