ರಾಯಚೂರು : ಹಿಂದುಳಿದ ಜನಾಂಗದ ಮೀಸಲಾತಿಗೆ ದಕ್ಕೆ ಬಾರದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ...
ಮಾನ್ವಿ : ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ಕಿರುಕುಳ, ಸುಳ್ಳು ಕೇಸ್ ದಾಖಲಿಸುವುದರಿಂದ ಘನತೆಗೆ ದಕ್ಕೆ ಬರುತ್ತಿದ್ದು ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಶೀಘ್ರವೇ ವಕೀಲರ...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸುಪ್ರೀಂ ಕೋರ್ಟ್ ನ್ಯಾಯವಾದಿ ದೇವಣ್ಣ ನಾಯಕ ಒತ್ತಾಯಿಸಿದರು. ಬಸನಗೌಡ ದದ್ದಲ್ ಮೂಲತಃ ಮಾನ್ವಿ ತಾಲೂಕಿನ ದದ್ದಲ್ ಗ್ರಾಮದಲ್ಲಿ ಜನಿಸಿರುತ್ತಾರೆ. ಮಾನ್ವಿಕ್ಷೇತ್ರದ ಕೋಟ್ನೇಕಲ್ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಯಗಳಿಸಿ ಪಕ್ಷಕ್ಕೆ ಮೋಸ ಮಾಡಿ ಬಿ.ಜೆ.ಪಿ ಸೇರಿದರು. 2008 ರಲ್ಲಿ ಬಿಜೆಪಿಯಿಂದ ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಸ್ಪರ್ಧಿಸಿ ಸೋತು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಮಾನ್ವಿ ಕ್ಷೇತ್ರಕ್ಕೆ ಸ್ಪರ್ಧಿಸಿ ಠೇವಣಿ ಕಳೆದುಕೊಂಡರು. 2004 ರಲ್ಲಿ ಬಿ.ಎಸ್.ಆರ್.ಪಕ್ಷಕ್ಕೆ ಮೋಸ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 2015-16 ರಲ್ಲಿ ಎಸ್.ಟಿ. ಮೀಸಲು ಕುರ್ಡಿ ಸ್ಪರ್ಧಿಸಿ ಹೀನಾಯವಾಗಿ ಸೋತರು. 2008 ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಕ್ಷೇತ್ರದ ಮತದಾರ ಪ್ರಭುಗಳು...
ರಾಯಚೂರು : ಓಇಕೆ ಮೊದಲ ಬ್ಯಾಚನ 2020 ಪದವಿ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆಗೆ ಮತ್ತು ವಿತರಣೆ ಆಗದೇ ಇರುವ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಬೇಕೆಂದು ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನ ಮಹಿಳಾ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯದ ಪದವಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಎನ್ಇಪಿ ಮೊದಲ ಬ್ಯಾಚ್ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ ಮತ್ತು ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿರುತ್ತಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೆ ಕಷ್ಟಕರವಾಗುತ್ತದೆ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕು ಎಂದು...
ರಾಯಚೂರು : ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿರುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನೆ ಸಂಸ್ಥೆ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ ಅವರನ್ನು ಕರ್ತವ್ಯದಿಂದ ವಜಾಗೊಳಿಸಬೇಕೆಂದು ಕರ್ನಾಟಕ ಜನಸೈನ್ಯ ಘಟಕ ಜಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ರಾಯಚೂರು ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್ ಮಟ್ಟದ ಸ್ವ-ಸಹಾಯ ಗುಂಪುಗಳು ಹಾಗೂ ಒಕ್ಕೂಟಗಳ ರಚನೆ ಮಾಡುವಲ್ಲಿ, ಕಾರ್ಯಕ್ರಮಗಳನ್ನು ರೂಪಿಸುವಲ್ಲಿ, ಮಹಿಳೆಯರಿಗೆ ಜೀವನೋಪಾಯ ಕಲ್ಪಿಸಲು ಸರ್ಕಾರ ಹಣವನ್ನು ನೀಡುತ್ತಿದ್ದು, ಈ ಯೋಜನೆಯು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸದೆ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ್ ಅವರು ಕಾರ್ಯದಲ್ಲಿ ನೈತಿಕತೆ ತೋರದೆ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಈ ಬಗ್ಗೆ ಅವರ ವಿರುದ್ಧ ಹಲವಾರು ಸಂಘ ಸಂಸ್ಥೆಗಳು ದೂರು ಸಲ್ಲಿಸಿದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಯಕ್ರಮದಲ್ಲಿ ಯವುದೇ ಪ್ರಚಾರ ಮಾಡದೇ, ಸಾರ್ವಜನಿಕ ಸಭೆಯನ್ನು ಕರೆಯದೇ ತಮಗೆ ಬೇಕಾದವರನ್ನು...