ರಾಯಚೂರು : ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಅಂತಿಮವಾಗಿ ಬಿವಿ ನಾಯಕ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು ಇಂದು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾನ್ವಿ...
ರಾಯಚೂರು : ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಅವರು ಕೈಗಾರಿಕಾ ಅಭಿವೃದ್ಧಿ ಪಡಿಸುವಲ್ಲಿ ನಿರ್ಲಕ್ಷತನ ಹಾಗೂ ಹಿಂದೇಟು ಹಾಕುತ್ತಿರುವುದರಿಂದ ಸಣ್ಣ ಉದ್ಯಮ ಮಾಡುವ ಯುವಕ ಯುವತಿಯರು ಹಿಂದುಳಿಯಲು...
ರಾಯಚೂರು : ಜಿಲ್ಲೆಯಲ್ಲಿ ಝೀಕಾ ವೈರಸ್ ಲಕ್ಷಣಗಳು ಕಂಡುಬರುತ್ತಿದ್ದು, ಈ ವೈರಸ್ ಹೆಚ್ಚಾಗಿ ಹರಡಂತೆ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು. ಝೀಕಾ ವೈರಸ್ಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ, ಜಿಲ್ಲೆಯ ಮಾನವಿ ತಾಲೂಕಿನ ನೀರಮಾನ್ವಿ ಗ್ರಾಮದ ಕೋಳಿ ಕ್ಯಾಂಪ್ ಎನ್ನುವ ಪ್ರದೇಶದಲ್ಲಿ ಈಗಾಗಲೇ ಒಬ್ಬ ಬಾಲಕನಲ್ಲಿ ಝೀಕಾ ವೈರಸ್ ಕಂಡುಬಂದಿದ್ದು, ಸೊಳ್ಳೆಗಳಿಂದಲೇ ಈ ವೈರಸ್ ಅತ್ಯಂತ ವೇಗವಾಗಿ ಹರಡುವುದರಿಂದ ಗ್ರಾಮದಲ್ಲಿ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಜನರು ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು. ನೀರಮಾನವಿಯ ಕೋಳಿ ಕ್ಯಾಂಪ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿ ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸಬೇಕು ಹಾಗೂ ಈ ಗ್ರಾಮಗಳಲ್ಲಿ ಸೊಳ್ಳೆಗಳು ಹೆಚ್ಚಾಗದಂತೆ ಫಾಗಿಂಗ್ ಮಾಡಿಸುವಂತೆ ಸೂಚನೆ...
ಮಾನ್ವಿ : ಕವಿ ಹಾಗೂ ಸಾಹಿತಿ ಸುರೇಶ್ ಗೌಡ ಮುಂದಿನ ಮನಿಯವರ 41 ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ವಿರಕ್ತಮಠದಲ್ಲಿ ಫೆ.14 ರಂದು ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ಮಂಜುನಾಥ್ ನಾಯಕ ಹೇಳಿದರು. ಅಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಕವಿ ಗೋಷ್ಠಿ, ಸಾಹಿತಿಗಳಿಗೆ ಸನ್ಮಾನ, ಪುಸ್ತಕ ಬಿಡುಗಡೆ, ತಾಲೂಕಿನ ಆರ್ಥಿಕವಾಗಿ ದುರ್ಬಲರಾಗಿರುವ ಬಡ ಕುಟುಂಬಗಳ ವಧುವರರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ 101 ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೊಜಿಸಲಾಗಿದ್ದು. ಆಸಕ್ತರು ಸುರೇಶ್ ಗೌಡ ಮುಂದಿನ ಮನಿ ದೂ. 8050900133, ಸೈಯದ್ ಆರಿಫ್ 8095385018 ಇವರಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿ ಕೊಳ್ಳಬೇಕು ಎಂದು ತಿಳಿಸಿದರು....
ರಾಯಚೂರು : ಶಿಕ್ಷಣಕ್ಕೆ ಪ್ರಮುಖ ಆಧ್ಯತೆ ನೀಡಿ ಕಲಿಕಾ ಚೇತರಿಕೆ ಹಾಗೂ ನಲಿ ಕಲಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂದನ ಇಲಾಖೆ, ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಜಿ.ಕುಮಾರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳು ಶಾಲೆ ಬಿಟ್ಟು ಕೆಲಸಕ್ಕಾಗಿ ತೆರಳುತ್ತಿರುವುದು ಕಂಡು ಬರುತ್ತಿದ್ದು, ಶಾಲಾ ಅವಧಿಗೂ ಮುಂಚೆ ಹೊಲಗಳಲ್ಲಿ ಕೆಲಸ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದೆ ಬಾಲಕಾರ್ಮಿಕ ಪದ್ದತಿ ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಅಗತ್ಯವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಶಿಕ್ಷದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡೊದರು. ಕಲಿಕಾ ಚೇತರಿಕೆ ಹಾಗೂ ನಲಿಕಲಿ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಹೆಚ್ಚಿಸಲು...