ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿರನ್ನಾಗಿ ಪರಿಗಣಿ
ರಾಯಚೂರು : ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿರನ್ನಾಗಿ ಪರಿಗಣಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. ಗ್ರಾಚ್ಯುಟಿ ಪಾವತಿಸಲು ಕೂಡಲೇ ಸರ್ಕಾರ ನಿರ್ದೇಶನ ನೀಡಬೇಕು.ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪ್ರಾರಂಭಿಸಬೇಕು. ಏಪ್ರೀಲ್ 25 ರಂದು ಸುಪ್ರೀಂ ಕೋರ್ಟ್ 1972 ರ ಗ್ರಾಚ್ಯುಟಿ ಕಾಯ್ದೆಯ ಪ್ರಕಾರ ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂಬ ಐತಿಹಾಸಿಕ ತೀರ್ಪ ನೀಡಿದೆ.ಇದರ ಪ್ರಕಾರ ರಾಜ್ಯದಾದ್ಯಂತ ಸಾವಿರಾರು ನಿವೃತ್ತಿ ನೌಕರರು ಸಿಡಿಪಿಒ,ಡಿ.ಡಿ. ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಅರ್ಜಿಯನ್ನು ಸ್ವತಃ ಹಾಗೂ ಅಂಚೆ ಮುಖಾಂತರ ಸಲ್ಲಿಸಿದ್ದಾರೆ.ಆದರೆ ಕೆಲವೆಡೆ ಸಿಡಿಪಿಒ,ಡಿ.ಡಿ.ನಿರ್ದೇಶಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಅರ್ಜಿಗಳನ್ನು ತೆಗೆದು ಕೊಳ್ಳಲು ಕೆಲವೆಡೆ ನಿರಾಕರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ 48 ವರ್ಷಗಳ ಇತಿಹಾಸದಲ್ಲಿ ಬಂದಂತಹ ಒಂದು ಸವಲತ್ತನ್ನು ಪಡೆಯಲು ಬೇಕಾದ ದಾಖಲಾತಿಗಳನ್ನು...