K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ ಚಿತ್ತ ಇಂದು ಬೆಂಗಳೂರಿನ ಕೇಂದ್ರ ಕಚೇರಿಯತ್ತ ನೆಟ್ಟಿದೆ. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿ ವಿಚಾರಣೆಯ ಟಿಕೆಟ್ ಹಂಚಿಕೆ ಸಭೆ...
ದೇವದುರ್ಗ : ದೇಶಪ್ರೇಮ, ಕರ್ತವ್ಯನಿಷ್ಠೆ, ಬದ್ಧತೆ,ನೈಪುಣ್ಯತೆಯಂತಹ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಜಿ. ಕುರಿತು ಎಚ್.ಡಿ.ಕುಮಾರಸ್ವಾಮಿಗೆ...
ಮಾನ್ವಿ : ಪಟ್ಟಣದ ಕಲ್ಮಠ ಶಿಕ್ಷಣ ಸಂಸ್ಥೆವತಿಯಿಂದ ಝೀಕಾ ವೈರಸ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಂಗವಾಗಿ ನಡೆದ ಜಾಗೃತಿ ಜಾಥಕ್ಕೆ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್...
ಮಾನ್ವಿ : ರಾಜ್ಯದಲ್ಲಿಯೇ ಮೊದಲ ಬಾರಿಗೆ ಝೀಕಾ ವೈರಸ್ ಕಂಡು ಬಂದಿರುವುದರಿಂದ ಜನರು ಅನಗತ್ಯವಾಗಿ ಭಯ ಬೀಳದೆ ಆರೋಗ್ಯ ಇಲಾಖೆಯವರು ನೀಡುವ ಜಾಗೃತೆಗಳನ್ನು ಪಾಲಿಸುವುದರಿಂದ ಝೀಕಾ ವೈರಸ್ ಸೋಂಕು ಹರಡದಂತೆ ತಡೆಯಬಹುದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮಿ ಮುಂಡಾಸ್ ತಿಳಿಸಿದರು. ತಾಲೂಕಿನ ನೀರಮಾನವಿ ಗ್ರಾಮದ ಹತ್ತಿರದ ಕೋಳಿ ಕ್ಯಾಂಪ್ನ ನಿವಾಸಿ 5ವರ್ಷದ ಬಾಲಕಿಯಲ್ಲಿ ರಾಜ್ಯದಲ್ಲಿಯೇ ಮೊದಲ ಝೀಕಾ ವೈರಸ್ ಸೋಂಕು ದೃಢ ಪಟ್ಟಿರುವುದರಿಂದ ಜಿಲ್ಲಾ ಆರೋಗ್ಯ ಶಿಕ್ಷಣ ವಿಭಾಗ ಸಂಯುಕ್ತ ಆಶ್ರಯದಲ್ಲಿ ಜನರಲ್ಲಿ ಜಾಗೃತಿ ಮೂಡಿಸಿದರು . ಝೀಕಾ ವೈರಸ್ ಸೋಂಕಿನ ಲಕ್ಷಣಗಳಾದ ತೀವ್ರ ಜ್ವರ, ಮೈ, ಕೈ ನೋವು, ಕೀಲು ನೋವು, ಮೈ ಮೇಲೆ ಗುಳ್ಳೆಗಳು ಏಳುವುದು, ಕಣ್ಣು ಕೆಂಪಾಗುವುದು ಕಂಡುಬಂದಲ್ಲಿ ಆರೋಗ್ಯ ಇಲಾಖೆಯ ಆಸ್ಪತ್ರೇಗಳಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಝೀಕಾ ವೈರಸ್ ಸೋಂಕು ಈಡೀಸ್ ಸೊಳ್ಳೆಗಳ ಕಡಿತದಿಂದ ಹರಡುವುದರಿಂದ. ಗರ್ಭಿಣಿ ಮಹಿಳೆಯರ ಗರ್ಭದಲ್ಲಿನ...
ರಾಯಚೂರು : ಬೆಟ್ಟದೂರು ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಬಂಜೆತನ ನಿವಾರಣೆ ವಿಚಾರವಾಗಿ ಚರ್ಚಿಸಲು ಸಮಾವೇಶವನ್ನು ಆಯೋಜನೆ ಮಾಡಲಾಗಿದೆ ಎಂದು ಬೆಟ್ಟದೂರು ಆಸ್ಪತ್ರೆಯ ವೈದ್ಯರಾದ ಡಾಕಯ. ಜೈಪ್ರಕಾಶ್ ಪಾಟೀಲ್ ಅವರು ಹೇಳಿದರು. ಎರಡು ದಿನಗಳ ಸಮಾವೇಶದಲ್ಲಿ ವಿಶೇಷವಾಗಿ ಬೆಟ್ಟದೂರು ಆಸ್ಪತ್ರೆಯಲ್ಲಿ ಮೊದಲ ದಿನ ತ್ರೀಡಿ ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸೆಗಳನ್ನು ಆಯೋಜನೆ ಮಾಡಲಾಗಿದ್ದು, ಇದರ ವಿಶೇಷತೆ ಏನು ಎಂದರೆ ಈ ಒಂದು ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ವೈದ್ಯರುಗಳು ಕೂಡ ಈ ಒಂದು ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು 3ಡಿಯಲ್ಲಿಯೇ ನೋಡುವಂತಹ ಒಂದು ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು. ಈ ಒಂದು ಸಮಾವೇಶ ರಾಯಚೂರಿನಲ್ಲಿ ಮೊಟ್ಟಮೊದಲ ಬಾರಿಗೆ ಆಗುತ್ತಿದ್ದು, ನೇರ ತ್ರೀಡಿ ವೀಕ್ಷಣೆ ವ್ಯವಸ್ಥೆ ಕೂಡ ಈ ಭಾಗದಲ್ಲಿ ಮೊದಲ ಬಾರಿಗೆ ಆಗುತ್ತಿದೆ ಎಂದು ಹೇಳಿದರು. ಈ ಒಂದು ಸಮಾವೇಶದ ಎರಡನೇ ದಿನ ಬಂಜೆತನ ನಿವಾರಣೆಗಾಗಿ ಯಾವ ರೀತಿಯಾದಂತಹ ಒಂದು...
K2 ನ್ಯೂಸ್ ಡೆಸ್ಕ್: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು....