ವಿಶ್ವ ಏಡ್ಸ್ ದಿನದಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮ
ರಾಯಚೂರು : ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ಬಿ.ಆರ್.ಬಿ ವೃತ್ತದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿವರೆಗೆ “ಸಮನ್ವಯಗೊಳಿಸು ನಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನದಿಂದ ಅಸಮಾನತೆಯನ್ನು ಪರಿಹರಿಸೋಣ ಮತ್ತು ಏಡ್ಸ್ ಅನ್ನು ಕೊನೆಗೊಳಿಸೋಣ” ಎಂಬ ಘೋಷವಾಕ್ಯದಡಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾನೂನು ಸೆವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೋಲಿಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ಜಿಲ್ಲೆಯ ರಕ್ತ ನಿಧಿ ಕೇಂದ್ರಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಿ.ಆರ್.ಬಿ ವೃತ್ತದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ. ಎಮ್. ಬೇಲೂರೆ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ,...