ಭೋವಿ ಸಮಾಜಕ್ಕೆ ಶೈಕ್ಷಣಿಕ ಅಭಿವೃದ್ದಿಗಾಗಿ ಆರ್ಥಿಕ ನೆರವು
ರಾಯಚೂರು : ಕರ್ನಾಟಕ ಭೋವಿ ಅಭಿವೃದ್ದಿ ನಿಗಮದಲ್ಲಿ ಶೈಕ್ಷಣಿಕ ಅಭಿವೃದ್ದಿಗಾಗಿ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಭೋವಿ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ವಾರ್ಷಿಕ ರೂ.1 ಲಕ್ಷಗಳ ಮಿತಿಯಲ್ಲಿ 5 ಲಕ್ಷಗಳ ವರಗೆ ಶೈಕ್ಷಣಿಕ ಸಾಲ ಸೌಲಭ್ಯವನ್ನು ಕಲ್ಪಿಸಬೇಕು.ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದಲ್ಲಿ ಭೋವಿ ಸಮುದಾಯದ ಜನರ ಮದುವೆ, ಸಭೆ ಸಮಾರಂಭ ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ರೂ. 30 ಲಕ್ಷಗಳ ವೆಚ್ಚದಲ್ಲಿ ಸಿದ್ದರಾಮೇಶ್ವರ ಸಮುದಾಯ ಭವನ ಮತ್ತು ರೂ.15ಲಕ್ಷಗಳ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಬೇಕು. ಭೋವಿ ಸಮುದಾಯದ ಯುವಕ ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗಳಾದ ಹತ್ತು ತಿಂಗಳ ತೋಟಗಾರಿಕೆ ತರಬೇತಿ, ಗಣಕಯಂತ್ರ ಹಾಗೂ ಟೈಪಿಂಗ್ ತರಬೇತಿ, ಭಾರಿ ಲಘುವಾಹನ, ಜೆಸಿಬಿ, ಹಿಟಾಚಿ, ಚಾಲನಾ ತರಬೇತಿ,ದ್ವಿತೀಯ ತ್ರಿಚಕ್ರ...