This is the title of the web page
This is the title of the web page

archiveಮನವಿಗೆ

State News

ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ: ವಕೀಲರ ಸಂಘದ ಮನವಿಗೆ

K2 ನ್ಯೂಸ್ ಡೆಸ್ಕ್ : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆಯನ್ನು ಡಿಸೆಂಬರ್ 18 ರಿಂದ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳನ್ನು ವಕೀಲರ ಸಂಘ, ಬೆಂಗಳೂರು ಹಾಗೂ ರಾಜ್ಯದ ವಿವಿಧ ವಕೀಲ ಸಂಘಗಳು ಕೋರಿವೆ. ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ನೀಡಿದ್ದರು. ಕಾಯ್ದೆಯ ಅಂತಿಮ ಕರಡು ಕಾನೂನು ಇಲಾಖೆಯಲ್ಲಿರುವುದಾಗಿ ಸಂಘವು ಮನವಿ ಪತ್ರದಲ್ಲಿ ತಿಳಿಸಿದೆ. ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕಾರ್ಯದರ್ಶಿ ಟಿ. ಜಿ.ರವಿ, ಖಜಾಂಚಿ ಹರೀಶ್ ಎಂ.ಟಿ...