K2 ನ್ಯೂಸ್ ಡೆಸ್ಕ್ : ಸುಮಾರು 5 ಲಕ್ಷ ಜನರಿಗೆ ಸ್ವಯಂ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯೋಜನೆಯನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ದೇಶದಲ್ಲಿಯೇ ಮೊಟ್ಟ ಮೊದಲು ಹೊಸ...
k2 ನ್ಯೂಸ್ ಡೆಸ್ಕ್ : ರಾಜ್ಯದ ಟೊಪ್ ನಗರಗಳಲ್ಲಿರುವ ದೋಭೀಘಾಟ್ ಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಸರ್ಕಾರ ವಿಶೇಷವಾಗಿರುವ ಸಹಾಯಧನ, ಯೋಜನೆಯನ್ನು...
ರಾಯಚೂರು : ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ರೈತರಿಗೆ ಸಾಕಷ್ಟು ಮೊಸವಾಗುತ್ತಿದ್ದು, ಈ ಯೋಜನೆ ಮೋಸದ ಯೋಜನೆಯಾಗಿದ್ದು ಸರ್ಕಾರವೇ ರೈತರ ಸುಲಿಗೆ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮಹಿಳಾ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಆರೋಪಿಸಿದರು. ರೈತರು ಬೆಳೆ ವಿಮೆಯಿಂದ ಲಾಭವಿದೆ ಎಂದು ಪ್ರಿಮಿಯಂ ತುಂಬಿದರೆ ಪರಿಹಾರವನ್ನು ಭಿಕ್ಷೆಯ ರೂಪದಲ್ಲಿ ನೀಡಲಾಗುತ್ತಿದೆ. 1ಲಕ್ಷ 7ಸಾವಿರದ 59 ರೂ ಪರಿಹಾರ ನೀಡಬೇಕಾಗಿರುವುದು, ಆದರೆ ಪರಿಹಾರದ ಹಣ ಬಂದಿರುವುದು 1462 ರೂ.ಮಾತ್ರ ಬಂದಿದೆ ಇದರಿಂದ ರೈತರಿಗೆ ದಿಕ್ಕುಗಾಣದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಮೆ ಕಂತು ಕಟ್ಟಿಸಿಕೊಳ್ಳುವ ಬಣ್ಣದ ಮಾತುಗಳನ್ನಾಡಲು ವಿಶೇಷ ಸಭೆಗಳನ್ನು ನಡೆಸಲು ಆತುರ ತೋರುವ ಕೃಷಿ ಇಲಾಖೆ ಅಧಿಕಾರಿಗಳು ಈಗ ವಿಮೆ ಹಣ ಬರದಿರುವಾಗ ಸಮಸ್ಯೆಗಳು ಎದುರಾದಾಗ ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ. ಜೀವವಿಮೆ ಅಧಿಕಾರಿಗಳನ್ನು ಕೇಳಿದರೆ ವಿಳಂಬ...
ರಾಯಚೂರು : ಕರ್ನಾಟಕ ಉದ್ಯೋಗ ಮಿತ್ರ ಇಲಾಖೆಯಿಂದ ಕಾಲು ಎಕರೆ,ಅರ್ಧ ಎಕರೆ ಒಂದು ಎಕರೆ ಇಂಡಸ್ಟ್ರೀಯಲ್ ಜಮೀನನ್ನು ಅನುಮೋದನೆಗೊಳಿಸುತ್ತಿರುವ ಜಿಲ್ಲಾಧಿಕಾರಿಗಳ ಕ್ರಮ ಕಾನೂನುಬಾಹಿರವಾಗಿದ್ದು ಇದರಲ್ಲಿ ಅವ್ಯವಹಾರ ನಡೆದಿರುವಂತೆ ಕಾಣುತ್ತಿದ್ದು ಕೂಡಲೇ ಸಂಬಂಧಪಟ್ಟ ಸಚಿವರು ಕ್ರಮ ಜರುಗಿಸಬೇಕೆಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಷಿಯೇಶನ್ ಅಧ್ಯಕ್ಷ ವಿ.ಲಕ್ಷ್ಮೀ ರೆಡ್ಡಿ ಒತ್ತಾಯಿಸಿದರು. ಈ ವಿಚಾರವಾಗಿ ವಾಣಿಜ್ಯೋದ್ಯಮ ಸಂಘ ಧ್ವನಿ ಎತ್ತಬೇಕಾಗಿತ್ತು ಆದರೆ ಆ ಸಂಘ ಎಲ್ಲಿದೆಯೋ ಆ ಸಂಘದ ಸದಸ್ಯರಿಗೆ ಯಾವಾಗ ಬುದ್ದಿ ಕೊಡುತ್ತಾನೋ ಎಂದು ಟೀಕಿಸಿದ ಅವರು, ಇತ್ತೀಚಿಗೆ ನಮ್ಮ ಸಂಘದ ವತಿಯಿಂದ ಕೆಐಡಿಬಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಏಕಗವಾಕ್ಷಿ ಸಭೆಯಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಇಲಾಖೆಯಿಂದ ಹಂಚಿಕೆ ಮಾಡಿರುವ 1/4 ಎಕರೆ, 1/2 ಎಕರೆ ಹಾಗೂ 1 ಎಕರೆ ಇಂಡಸ್ಟ್ರೀಯಲ್ ಜಮೀನುಗಳಿಗೆ ನೀಡಿರುವ ಅನುಮೋದನೆ ರದ್ದುಪಡಿಸಿ ಎಸ್.ಸಿ/ಎಸ್.ಟಿ ಜನಾಂಗಕ್ಕೆ ಸಣ್ಣ ಉದ್ದಿಮೆದಾರರಿಗೆ ಹಂಚಿಕೆ ಮಾಡಬೇಕೆಂದು ಕೋರಿದ್ದೇವೆ ಎಂದು ಹೇಳಿದರು. ಸರ್ವೇ...
ರಾಯಚೂರು : ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ೦7 ತಾಲೂಕುಗಳಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಲ್ಲಿ ಪ್ರಗತಿ ಸಾಧಿಸಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗಿದ್ದು, ಯಾವುದೇ ಯೋಜನೆಯನ್ನು ಅನುಷ್ಟಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದೆ ಎಂದರು. ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ...
K2 ನ್ಯೂಸ್ ಡೆಸ್ಕ್: ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ಕಳಸಾ ಬಂಡೂರಿ ಯೋಜನೆ ಹಾಗೂ ಮೇಕೆದಾಟು ಯೋಜನೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ದೊರೆಯ ಬೇಕಾದ ತೀರುವಳಿಗಳನ್ನು ಶೀಘ್ರವೇ ಒದಗಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ತೀವ್ರಗತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕುರಿತು ಮಾಹಿತಿ ನೀಡಿದರು....