ಮೀಸಲಾತಿ ವರ್ಗೀಕರಣ ಆದೇಶ ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ
ರಾಯಚೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಅರುಣ ಮಿಶ್ರಾರವರ ನೇತೃತ್ವದ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಯವರಲ್ಲಿ ಮೀಸಲಾತಿಯ ವರ್ಗೀಕರಣವನ್ನು ಮಾಡಬಹುದು ಎಂದು ಮಾಡಿರುವ ಆದೇಶವನ್ನು ರದ್ದು ಮಾಡಬೇಕೆಂದು ರಿಟ್ ಅರ್ಜಿ ಸಲ್ಲಿಸಲಾಗುವುದೆಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ ಮಿತ್ರ ಹೇಳಿದರು. ನ್ಯಾಯಮೂರ್ತಿ ಅರುಣ್ ಮಿಶ್ರಾ ರವರ ನೇತೃತ್ವದ ಸಂವಿಧಾನ ಪೀಠದ ಆದೇಶದ ಪ್ರಕಾರ, ಸಂವಿಧಾನ ಅನುಚ್ಛೇದ(16(4)ರ ಪ್ರಕಾರ ಹಿಂದುಳಿದ ವರ್ಗಗಳ ವ್ಯಾಪ್ತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳು ಬರುತ್ತವೆ. ರಾಜ್ಯ ಸರ್ಕಾರವು ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಧಿಕಾರ ಹೊಂದಿದೆ. ಮತ್ತು ಮೀಸಲಾತಿಯನ್ನು ಸರಿ ಸಮಾನವಾಗಿ ಹಂಚಿಕೆ ಮಾಡಬಹುದು ಈ ಕಾರಣದಿಂದ ನಾವು ಈ.ವಿ.ಚಿನ್ನಯ್ಯ ರವರ ಆದೇಶವನ್ನು ಒಪ್ಪಲು ಬರುವುದಿಲ್ಲ. ಕಾರಣ ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯವನ್ನು 7 ಅಥವಾ ಅದಕ್ಕೂ ಮೇಲ್ಪಟ್ಟ ನ್ಯಾಯಾಧೀಶರನ್ನೊಳಗೊಂಡ...