This is the title of the web page
This is the title of the web page

archiveಲೆಕ್ಕಕ್ಕೆ

State News

ಬಿಜೆಪಿಯಲ್ಲಿ ಯಡಿಯೂರಪ್ಪ ಲೆಕ್ಕಕ್ಕೆ ಇಲ್ಲ

K2 ನ್ಯೂಸ್ ಡೆಸ್ಕ್ : ನಿನ್ನೆ ಯಡಿಯೂರಪ್ಪ ಅವರ ಮಾತಿನಲ್ಲಿ, ಅವರ ನೋವು, ದುಗುಡ ಎಲ್ಲವೂ ಅರ್ಥವಾಗುತ್ತಿತ್ತು.ಅವರನ್ನು ಪಕ್ಷದಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ನಾನು ಕುಕ್ಕರ್ ಬಾಂಬ್ ಸ್ಫೋಟ ಘಟನೆಯನ್ನು ಸಮರ್ಥಿಸಿಕೊಂಡಿಲ್ಲ. ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದೇನೆ. ಅದನ್ನು ಬಿಟ್ಟು ಬಾಂಬ್ ಸ್ಫೋಟ ವಿಚಾರ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ಯಡಿಯೂರಪ್ಪನವರು ತಮ್ಮ ಪಕ್ಷದಲ್ಲಿನ ಭಿನ್ನಮತ ವಿಚಾರದ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾರೆ. ಇದನ್ನು ನಾನು ಹೇಳಿದ್ದೇನೆ. ಯಡಿಯೂರಪ್ಪಹಾಗೂ ಬೊಮ್ಮಾಯಿ ಅವರ ನಡುವಣ ಬಿಕ್ಕಟ್ಟಿನ ವಿಚಾರ ಮುಚ್ಚಿಕೊಳ್ಳಲು ನಿಮ್ಮ ಹೇಳಿಕೆ ತಿರುಚಿದ್ದಾರಾ ಎಂದು ಕೇಳಿದಾಗ, ' ಹೌದು, ಅವರ ಪಕ್ಷದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ...