K2 ಕ್ರೈಂ ನ್ಯೂಸ್: ಬೆಳ್ಳಂ ಬೆಳಗ್ಗೆಬೆಳಗಾವಿಯಲ್ಲಿ ಜವರಾಯ ತನ್ನ ಅಟ್ಟಹಾಸವನ್ನ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ. ಚಾಲುಕ್ಲಾ ನಿಯಂತ್ರಣ...
K2 ಕೊವಿಡ್ ನ್ಯೂಸ್ : ಚೀನಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊವಿಡ್ ಪ್ರಕರಣಗಳು ಇದೀಗ ಮತ್ತೊಮ್ಮೆ ಇಡೀ ವಿಶ್ವವನ್ನೇ ಚಿಂತೆಗೀಡು ಮಾಡಲಾರಂಭಿಸಿವೆ. ಮಾಧ್ಯಮ ವರದಿಯೊಂದರ ಪ್ರಕಾರ ಚೀನಾ...
K2 ನ್ಯೂಸ್ ಡೆಸ್ಕ್ : ಫಿಫಾ ವರ್ಲ್ಡ್ ಕಪ್ ನಲ್ಲಿ ಎರಡನೇ ಪತ್ರಕರ್ತ ಮೃತಪಟ್ಟಿದ್ದು ಈ ಸಾವಿನಿಂದ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ತಾರ್ನಲ್ಲಿ ನಡಿತಿರೋ ಫಿಫಾ ವರ್ಲ್ಡ್ಕಪ್...
ರಾಯಚೂರು : ಗುಡದೂರು ನಾಲೆ ಬಳಿ ಬೈಕ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ನಾಲೆ ಬಳಿ ಘಟನೆ ಸಂಭವಿಸಿದೆ. ಮೃತ ಮೂವರು ವ್ಯಕ್ತಿಗಳನ್ನು ಆಂಧ್ರ ಮೂಲದ ನಂದ್ಯಾಲ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು ಎನ್ನಲಾಗಿದೆ. ಮಸ್ಕಿ ಪಟ್ಟಣದಲ್ಲಿ ಊಟ ಮುಗಿಸಿಕೊಂಡು ನಾಲ್ಕು ಜನ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ನಿನ್ನೆ ರಾತ್ರಿ ಊಟಕ್ಕೆಂದು ಮಸ್ಕಿ ಪಟ್ಟಣಕ್ಕೆ ಬಂದಿದ್ದಾರೆ. ವಾಪಸ್ ಆಗುತ್ತಿದ್ದ ವೇಳೆ ಬೈಕ್ ದಾರುಣ ಘಟನೆ ಸಂಭವಿಸಿದೆ ಎಂದು...
ರಾಯಚೂರು : ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಘಟನೆ ಸಂಭವಿಸಿದೆ. ಮೃತರನ್ನು ಶರತ್, ಪ್ರವೀಣ್ ಎಂದು ಗುರುತಿಸಲಾಗಿದೆ. ರಾಯಚೂರು ನಗರದ ಮಡ್ಡಿಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಯರಗೇರಾದಿಂದ ಬೈಕ್ ಸವಾರರು ರಾಯಚೂರು ಕಡೆ ಬರುವಾಗ, ರಾಯಚೂರಿನಿಂದ ಮಂತ್ರಾಲಯಕ್ಕೆ ಹೋಗುವಾಗ ಮಾರ್ಗಮಧ್ಯ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ತನಿಖೆ ಮುಂದುವರೆಸಿದ್ದಾರೆ....