This is the title of the web page
This is the title of the web page

archiveಸ್ಫೂರ್ತಿ

Local News

ಈ ಭಾಗದ ಹೋರಾಟ, ಬದುಕಿಗೆ ಮಾಧ್ಯಮಗಳು ಧ್ವನಿಯಾಗಿರುವುದು ಸ್ಫೂರ್ತಿ

ಲಿಗಸುಗೂರು: 371 (ಜೆ ) ಸಂಪೂರ್ಣ ಫಲ ಸಿಗುತ್ತಿಲ್ಲ. ಸರ್ಕಾರ ಮೀನಾಮೇಷಗಳನ್ನು ಎಣಿಸದೆ ಜನರ ಜೀವನ ಮಟ್ಟವನ್ನು ಹೆಚ್ಚಿಸುವ ಕ್ರಿಯಾಶೀಲತೆಯನ್ನು ತೋರಿಸಬೇಕಾಗಿದೆ. ಜಿಲ್ಲೆಗಳಲ್ಲಿ ಅನೇಕ ಸಮಸ್ಯೆಗಳಿವೆ. ಸಾಕಷ್ಟು ಸಂಪನ್ಮೂಲಗಳಿದ್ದರೂ ಅವುಗಳ ಲಾಭ ಬೇರೆ ಜನ ಪಡೆದುಕೊಳ್ಳುತ್ತಿದ್ದಾರೆ. ಈ ಭಾಗದ ಎಲ್ಲ ಹೋರಾಟಗಳ ಬದುಕಿಗೆ ಮಾಧ್ಯಮಗಳು ಧ್ವನಿಯಾಗಿ ನಿಲ್ಲುತ್ತಿರುವುದು ನಮಗೆ ಸ್ಫೂರ್ತಿಯಾಗಿದೆ ಎಂದು ಸಾಹಿತಿ ವೀರಹನುಮಾನ ಹೇಳಿದರು. ಜಿಲ್ಲೆಯಲ್ಲಿ ಸಮೃದ್ಧ ಸಂಪನ್ಮೂಲಗಳಿವೆ. ಎರಡು ನದಿಗಳು ಹರಿಯುತ್ತಿವೆ. ಆದರೂ ನೀರಿನ ದಾಹ ತೀರಿಸಲಾಗುತ್ತಿಲ್ಲ. ಏರುತ್ತಿರುವ ಬಿಸಿಲಿನ ತಾಪವಿದೆ, ಬತ್ತಿದ ಕೆರೆಗಳು , ಬಡತನ , ದಾರಿದ್ರ್ಯ ನಮ್ಮ ಜೊತೆಯಲ್ಲಿಯೇ ನೆಲೆಯಾಗಿವೆ. ಕೃಷಿಗೆ ಅದರಲ್ಲೂ ಹತ್ತಿ , ಭತ್ತಕ್ಕೆ ಹೆಸರಾದ ನಮ್ಮ ಜಿಲ್ಲೆ ಆ ಹೆಸರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿಲ್ಲ. ರೈತರ ಬಾಳನ್ನು ಹಸನು ಮಾಡುವ , ಆತ ಹೆಮ್ಮೆಯಿಂದ ಬಾಳುವ ಪರಿಸ್ಥಿತಿ ನಿರ್ಮಾಣವಾಗಿಲ್ಲ' ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯ...