K2 ಕನ್ನಡ ನ್ಯೂಸ್ ನಿಮಗಾಗಿ.. ಮಕ್ಕಳಿಂದ ಹಿಡಿದು ಯುವ ವಿದ್ಯಾರ್ಥಿಗಳಿಗಾಗಿ ನಿರುದ್ಯೋಗಿ ಯುವಕರಿಗಾಗಿ ಒಂದು ಮಹತ್ತರ ಹೆಜ್ಜೆಯನ್ನು ಇಡುತ್ತಿದೆ.. ಅತಿ ಶೀಘ್ರದಲ್ಲಿ ನಿಮ್ಮ ಮೆಮೊರಿ ಪವರ್ ಯಾವ...
K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ...
K2 ನ್ಯೂಸ್ ಡೆಸ್ಕ್ : ಸಾಮಾನ್ಯ ಕುಟಂಬದ ಮಗು ಯಾವುದೇ ರೀತಿಯ ಮಾನಸಿಕ ಒತ್ತಡವಿಲ್ಲದೆ, ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ 25 ನೇ ರಾಜ್ಯ ಮಟ್ಟದ ಕ್ರೀಡಾಕುಟ- ರಜತ ಚುಂಚಾದ್ರಿ ಕ್ರೀಡೋತ್ಸವ 2022 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. *ವಿಶ್ವಮಾನವರು* ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ 1.25 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಎಲ್ಲಾ ಮಕ್ಕಳಿಗೆ ಅನ್ನ, ವಿದ್ಯೆ, ಸಂಸ್ಕøತಿಯ ದಾನ ನೀಡಿ, ತಂದೆತಾಯಿಯಂತೆ ಸಲಹುತ್ತಿದ್ದಾರೆ. ದೈಹಿಕ ಶಿಕ್ಷಣ ನೀಡಿ ವಿಶ್ವಮಾನವರನ್ನಾಗಿ ಮಕ್ಕಳನ್ನು ಬೆಳೆಸುತ್ತಿದ್ದಾರೆ. ಈ ಸಂಸ್ಥಾನಕ್ಕೆ ಕೋಟಿ ನಮನಗಳು ಎಂದರು. ಯಾವುದೇ ಬೇಧಭಾವವಿಲ್ಲದೆ ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಇಲ್ಲಿಗೆ ಬಂದು ಇಂದು ನಾನು ಬಹಳ ಪುನೀತನಾಗಿದ್ದೇನೆ. ಆದಿಚುಂಚನಗಿರಿ ಸಂಸ್ಥೆ ಎಷ್ಟು ಬೆಳೆದಿದೆ ಎನ್ನುವುದಕ್ಕೆ ಈ ಕ್ರೀಡಾಕೂಟಗಳು ಸಾಕ್ಷಿಯಾಗಿವೆ ಎಂದರು. *ಶಿಕ್ಷಣದ...
K2 ನ್ಯೂಸ್ ಡೆಸ್ಕ್ : ಶಿಕ್ಷಣ ಮತ್ತು ಕಲಿಕೆಯಲ್ಲಿ ಸಾಕಷ್ಟು ಹಂತಗಳಿವೆ, ಕಲಿಕೆ ಎಂದರೆ ಶಾಲಾ ಕಾಲೇಜುಗಳಿಗೆ ಹೋಗಿ ಮಾತ್ರ ಕಲಿಯುವುದು ಅಲ್ಲ ಅದರ ಹೊರತಾಗಿಯೂ ಪ್ರಾಯೋಗಿಕ ಕಲಿಕೆ ಇದೆ ಅದನ್ನು ಅನೌಪಚಾರಿಕ ಕಲಿಕೆ ಎಂದರೆ ತಪ್ಪಾಗಲಿಕ್ಕಿಲ್ಲ. ಈ ಉತ್ತಮ ಶಿಕ್ಷಣ ಪಡೆದುಕೊಳ್ಳುವುದು ಮತ್ತು ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಚಿತ್ರಗಳು, ಬಣ್ಣಗಳು, ಗ್ರಾಫ್ಗಳು ಮತ್ತು ಇತರ ಆರಾಮದಾಯಕ ಕಲಿಕೆಯಿಂದ ಇದು ಸೂಕ್ತವಾಗಿರುತ್ತದೆ. ಸುತ್ತ ಮುತ್ತಲಿನ ಸಣ್ಣ ಬದಲಾವಣೆಯನ್ನೂ ಕೂಡ ನೀವು ಇದರಲ್ಲಿ ಗಮನಿಸಬಹುದು. ಶ್ರವಣ ಮಾಧ್ಯಮ: ಈ ಕಲಿಯುವವರು ಧ್ವನಿ ಅಥವಾ ಮಾತಿನ ಮೂಲಕ ಮಾಹಿತಿಯನ್ನು ಪ್ರಸರಣ ಮಾಡುತ್ತದೆ. ಸಂಗೀತ, ಪ್ರಾಸಗಳು ಮತ್ತು ಲಯಬದ್ಧವಾಗಿ ಕಲಿಕಾ ವಿಷಯವನ್ನು ಗ್ರಹಿಸಬಹುದು. ಇದು ಓದುವುದಕ್ಕಿಂತ ಹೆಚ್ಚು ನೆನಪಿನಲ್ಲಿ ಉಳಿಯುವ ಸಂಗತಿಯಾಗಿದೆ. ಮೌಖಿಕ ಅಥವಾ ಭಾಷಾ ಕಲಿಕೆ ಓದುವುದಕ್ಕಿಂತ ಹೆಚ್ಚಿನದಾಗಿ ಇನ್ನೊಬ್ಬರೊಟ್ಟಿಗೆ ಚರ್ಚೆ ಮಾಡುವುದು ಮತ್ತು ಸಂವಹನ ನಡೆಸುವುದರ ಮೂಲಕ ಹೆಚ್ಚು...