This is the title of the web page
This is the title of the web page

archive#K. Somashekhar

Local News

ಡಿ.17 ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ

ರಾಯಚೂರು : ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಪ್ರಥಮ ರಾಜ್ಯ ಮಟ್ಟದ ಸಮ್ಮೇಳನವನ್ನು ಡಿಸೆಂಬರ್ 17,18 ರಂದು ಎರಡು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜು, ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹೇಳಿದರು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಹಾಸ್ಟೆಲ್ ಕಾರ್ಮಿಕರಿಂದ ಬೃಹತ್ ಮೆರವಣಿಗೆ ನಡೆಯಲಿದೆ. 17ರಂದು ಬೆಳಿಗ್ಗೆ ಬಹಿರಂಗ ಅಧಿವೇಶನ, ಮಹಾರಾಜ ಕಾಲೇಜಿನಲ್ಲಿ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ. ಅದೇ ದಿನ ಸಂಜೆಯಿಂದ ಡಿಸೆಂಬರ್ 18ರ ಸಂಜೆಯವರೆಗೆ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಸುಮಾರು 400 ಜನ ಪ್ರತಿನಿಧಿ ಗಳು ಭಾಗವಹಿಸಲಿದ್ದಾರೆ ಎಂದರು. ಕರಡು ಮುಖ್ಯ ಗೊತ್ತುವಳಿ, ಸಂಘಟನಾತ್ಮಕ ಕೊರತೆ ಹಾಗೂ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಸರ್ಕಾರವೇ ವೇತನ ಸಹಿತ ಶಾಸನಬದ್ಧ ಸೌಕರ್ಯಗಳನ್ನು ನೀಡಬೇಕೆಂದು ಅಗ್ರಹಿಸಿ ಮಂಡನೆಯಾಗುವ ಗೊತ್ತುವಳಿಗಳ ಮೇಲೆ ಚರ್ಚೆಗಳು ನಡೆಯಲಿವೆ. ನಂತರ...