This is the title of the web page
This is the title of the web page

archive#raichur

Entertainment News

ಕುತೂಹಲ ಕೆರಳಿಸಿದ ಖೋ ಖೋ ಪಂದ್ಯವಳಿ

ರಾಯಚೂರು : 2ನೇ ಬಾರಿ ರಾಜ್ಯಮಟ್ಟದ ಹೊನಲು ಬೆಳಕಿನ ಮೂರು ದಿನಗಳ ಖೋ ಖೋ ಪಂದ್ಯವಳನ್ನು ಯರಮರಸ್ ಆದಿ ಬಸವ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜನೆ. ರಾಯಚೂರು ನಗರದ ವಾರ್ಡ್ ನಂ 33 ರ ಯರಮರಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಖೋ ಖೋ ಪಂದ್ಯವಳಿ ನಡೆಸಲಾಗುತ್ತಿದೆ. ಪಂದ್ಯಗಳಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಪಟುಗಳು ಭಾಗಿಯಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 18 ಕ್ರೀಡಾ ತಂಡಗಳು ಭಾಗಿಯಾಗಿವೆ. ರಾಜ್ಯಮಟ್ಟದ ಖೋ ಖೋ ಕ್ರೀಡೆಗೆ ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಎಸ್ ಬೋಸರಾಜ್ ಅವರು ಚಾಲನೆ ನೀಡಿದರು. ಈ ಒಂದು ಕ್ರೀಡೆಯಲ್ಲಿ ಊರಿನ ಯುವಕರು, ಸಾರ್ವಜನಿಕರು ಭಾಗಿಯಾಗಿ ಕ್ರೀಡಾಪಟುಗಳಿಗೆ ಹೋರಿದುಂಬಿಸಿದ್ದು ವಿಶೇಷವಾಗಿತ್ತು....
Local News

ರಾಜ್ಯಮಟ್ಟದ ಹೊನಲು ಬೆಳುಕು ಖೋ-ಖೋ ಪಂದ್ಯಾವಳಿಗೆ ಚಾಲನೆ ನೀಡಿದ ಶಿವರಾಜ್ ಪಾಟೀಲ್

ರಾಯಚೂರು : ನಗರದ ಯರಮರಸ್ ನಲ್ಲಿ ರಾಜ್ಯಮಟ್ಟದ ಆಹ್ವಾನಿತ ಪುರುಷ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಶಾಸಕ ಶಿವರಾಜ್ ಪಾಟೀಲರಿಂದು ಚಾಲನೆ‌ ನೀಡಿದರು. ಜಿಲ್ಲಾ ಖೋ-ಖೋ ಆಸೋಸಿಯೇಷನ್ , ಆದಿಬಸವೇಶ್ವರ ಸ್ಪೋಟ್೯ ಕ್ಲಬ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಖೋ-ಖೋ ಸಂಸ್ಥೆಯ ಸಹಭಾಗಿತ್ವದಲ್ಲಿ 3 ದಿನಗಳ ಕಾಲ ಈ ಪಂದ್ಯಾವಳಿಗಳು ಜರುಗಲಿವೆ. ಈ ವೇಳೆ ಮಾತನಾಡಿದ ನಗರ ಶಾಸಕ ಶಿವರಾಜ್ ಪಾಟೀಲ್ ಕ್ರೀಡೆಯು ಜೀವನದ ಅವಿಭಾಜ್ಯ ಅಂಗವಾಗಿದ್ದು ಜಿಲ್ಲೆಯ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದ್ದು , ಇಲ್ಲಿನ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿಯೂ ಮಿಂಚಲಿ ಎಂದರು. ಈ ಪಂದ್ಯವಾಳಿಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವದುರ್ಗ ಶಾಸಕ ಶಿವನಗೌಡ ನಾಯಕ್ ಹಾಗೂ ಜಿಲ್ಲಾ ಪ್ರಭಾವಿ ಕಾಂಗ್ರೆಸ್ ಮುಖಂಡರಾದ ಎನ್.ಎಸ್ ಬೋಸರಾಜ್ ರವರು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು , ವಿವಿಧ ಜಿಲ್ಲೆಯ ಕ್ರೀಡಾಳುಗಳು ಉಪಸ್ಥಿತರಿದ್ದರು....
Local News

ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಪ್ರತಿಭಟನೆ

ರಾಯಚೂರು : ಜಿಲ್ಲೆಯ ಬಿಸಿಎಂ ಹಾಸ್ಟೆಲುಗಳ ಕಾರ್ಮಿಕರಿಗೆ 8 ತಿಂಗಳ ಬಾಕಿ ವೇತನ ಪಾವತಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಯಲ ಕಾರ್ಮಿಕರ ಸಂಘ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧ ವಸತಿ ನಿಗಳಲ್ಲಿ ಕೆಲಸ ಮಾಡುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾನ ಇಲಾಖೆ, ಸಮಾಜ ಕಲ್ಯಾಣ, ಆಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯ ಕಾರ್ಮಿಕರಿಗೆ ಕಳೆದ 8 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಈ ಕುರಿತು ನ.28 ರಂದು ಪ್ರತಿಭಟನೆ ನಡೆಸಿದ ನಂತರ ಡಿಸೆಂಬರ್ ತಿಂಗಳ ಒಳಗೆ 7-8 ತಿಂಗಳ ಬಾಕಿ ವೇತನವನ್ನು ಪಾವತಿಸುತ್ತೆವೆಂದು ಹೇಳಿ ಕೇವಲ 3 ತಿಂಗಳ ವೇತನವನ್ನು ಮಾತ್ರ ಪಾವತಿಸಲಾಗಿದೆ. ಇದರಿಂದ ಕಾರ್ಮಿಕರು ತೀವ್ರ ಆರ್ಥಿಕ ಸಂಕಷ್ಟ ಸಿಲುಕಿದ್ದಾರೆ ಎಂದು ಆಗ್ರಹಿಸಿದರು. ಆದ್ದರಿಂದ ಕೂಡಲೇ ಸಂಬಂಧಿಸಿದ ಇಲಾಖೆಗಳು ಶೀಘ್ರವಾಗಿ ಕಾರ್ಮಿಕರ ವೇತನವನ್ನು...
Local News

2020ನೇ ಬ್ಯಾಚುನ ಫಲಿತಾಂಶ ಬಿಡುಗಡೆಗೆ ಒತ್ತಾಯ

ರಾಯಚೂರು : ಓಇಕೆ ಮೊದಲ ಬ್ಯಾಚನ 2020 ಪದವಿ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆಗೆ ಮತ್ತು ವಿತರಣೆ ಆಗದೇ ಇರುವ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಬೇಕೆಂದು ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನ ಮಹಿಳಾ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಯದ ಪದವಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ ಮತ್ತು ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿರುತ್ತಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೆ ಕಷ್ಟಕರವಾಗುತ್ತದೆ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕು ಎಂದು...
Local News

ಮೀಸಲಾತಿ ವರ್ಗೀಕರಣ ಆದೇಶ ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ

ರಾಯಚೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಅರುಣ ಮಿಶ್ರಾರವರ ನೇತೃತ್ವದ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಯವರಲ್ಲಿ ಮೀಸಲಾತಿಯ ವರ್ಗೀಕರಣವನ್ನು ಮಾಡಬಹುದು ಎಂದು ಮಾಡಿರುವ ಆದೇಶವನ್ನು ರದ್ದು ಮಾಡಬೇಕೆಂದು ರಿಟ್ ಅರ್ಜಿ ಸಲ್ಲಿಸಲಾಗುವುದೆಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ ಮಿತ್ರ ಹೇಳಿದರು. ನ್ಯಾಯಮೂರ್ತಿ ಅರುಣ್ ಮಿಶ್ರಾ ರವರ ನೇತೃತ್ವದ ಸಂವಿಧಾನ ಪೀಠದ ಆದೇಶದ ಪ್ರಕಾರ, ಸಂವಿಧಾನ ಅನುಚ್ಛೇದ(16(4)ರ ಪ್ರಕಾರ ಹಿಂದುಳಿದ ವರ್ಗಗಳ ವ್ಯಾಪ್ತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗಳು ಬರುತ್ತವೆ. ರಾಜ್ಯ ಸರ್ಕಾರವು ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಧಿಕಾರ ಹೊಂದಿದೆ. ಮತ್ತು ಮೀಸಲಾತಿಯನ್ನು ಸರಿ ಸಮಾನವಾಗಿ ಹಂಚಿಕೆ ಮಾಡಬಹುದು ಈ ಕಾರಣದಿಂದ ನಾವು ಈ.ವಿ.ಚಿನ್ನಯ್ಯ ರವರ ಆದೇಶವನ್ನು ಒಪ್ಪಲು ಬರುವುದಿಲ್ಲ. ಕಾರಣ ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಈ ವಿಷಯವನ್ನು 7 ಅಥವಾ ಅದಕ್ಕೂ ಮೇಲ್ಪಟ್ಟ ನ್ಯಾಯಾಧೀಶರನ್ನೊಳಗೊಂಡ...
Local News

ಬಂಜೆತನ ನಿವಾರಣೆ ಕುರಿತು ಸಮಾವೇಶ

ರಾಯಚೂರು : ಬೆಟ್ಟದೂರು ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಬಂಜೆತನ ನಿವಾರಣೆ ವಿಚಾರವಾಗಿ ಚರ್ಚಿಸಲು ಸಮಾವೇಶವನ್ನು ಆಯೋಜನೆ ಮಾಡಲಾಗಿದೆ ಎಂದು ಬೆಟ್ಟದೂರು ಆಸ್ಪತ್ರೆಯ ವೈದ್ಯರಾದ ಡಾಕಯ. ಜೈಪ್ರಕಾಶ್ ಪಾಟೀಲ್ ಅವರು ಹೇಳಿದರು. ಎರಡು ದಿನಗಳ ಸಮಾವೇಶದಲ್ಲಿ ವಿಶೇಷವಾಗಿ ಬೆಟ್ಟದೂರು ಆಸ್ಪತ್ರೆಯಲ್ಲಿ ಮೊದಲ ದಿನ ತ್ರೀಡಿ ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸೆಗಳನ್ನು ಆಯೋಜನೆ ಮಾಡಲಾಗಿದ್ದು, ಇದರ ವಿಶೇಷತೆ ಏನು ಎಂದರೆ ಈ ಒಂದು ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ವೈದ್ಯರುಗಳು ಕೂಡ ಈ ಒಂದು ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು 3ಡಿಯಲ್ಲಿಯೇ ನೋಡುವಂತಹ ಒಂದು ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು. ಈ ಒಂದು ಸಮಾವೇಶ ರಾಯಚೂರಿನಲ್ಲಿ ಮೊಟ್ಟಮೊದಲ ಬಾರಿಗೆ ಆಗುತ್ತಿದ್ದು, ನೇರ ತ್ರೀಡಿ ವೀಕ್ಷಣೆ ವ್ಯವಸ್ಥೆ ಕೂಡ ಈ ಭಾಗದಲ್ಲಿ ಮೊದಲ ಬಾರಿಗೆ ಆಗುತ್ತಿದೆ ಎಂದು ಹೇಳಿದರು. ಈ ಒಂದು ಸಮಾವೇಶದ ಎರಡನೇ ದಿನ ಬಂಜೆತನ ನಿವಾರಣೆಗಾಗಿ ಯಾವ ರೀತಿಯಾದಂತಹ ಒಂದು...
Local News

ಹಾರುಬೋದಿಯಿಂದ ರೈತರ ಬೆಳೆ ನಷ್ಟ

ರಾಯಚೂರು : ರೈಸ್ ಮಿಲ್ ದಿಂದ ಹೊರ ಸೂಸುವ ಹಾದುಬೂದಿಯಿಂದ ಅಕ್ಕ ಪಕ್ಕದ ಜಮೀನುಗಳಲ್ಲಿ ಬೆಳೆ ನಷ್ಟವಾಗುತ್ತಿದ್ದು ರೈತರಿಗೆ ಪರಿಹಾರ ಒದಗಿಸಲು ಮತ್ತು ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ನಗರದ ಇಂಡಸ್ಟ್ರಿಯಲ್ ಏರಿಯಾ ಪ್ಲಾಟ್ ನಂಬರ್ 212 ಪಿ6, 212ಪಿ7, 211/5 ರಲ್ಲಿರುವ ಮಂಚಿಕೊಂಡ ರೈಸ್ಸ್ ಮಿಲ್ ಇಂದ ದಿನನಿತ್ಯ ಭಾರಿ ಪ್ರಮಾಣದಲ್ಲಿ ಹಾರು ಬೂದಿ ಹೊರ ಸೂಸುತ್ತಿದ್ದು ಇದರಿಂದ ಗಾಳಿಗೆ ಅಕ್ಕಪಕ್ಕದ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಷ್ಟವಾಗುತ್ತಿದೆ. ಇದರಿಂದ ರೈತರು ತೊಂದರೆಯನ್ನು ಅನುಭವಿಸ ಬೇಕಾಗುತ್ತಿದೆ. ರೈತರು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ, ತಮ್ಮ ಜಮೀನುಗಳಲ್ಲಿ ಸಾಲ ಮಾಡಿಕೊಂಡು ಬೆಳೆಯನ್ನು ಬೆಳೆದಿದ್ದಾರೆ. ಹಾರುವುದಿಂದ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಗೆ 10 ಸಾವಿರ ದರ ನಿಗದಿ ಇದ್ದು,...
Local News

ಗಾಂಜಾ ಬೆಳೆದ ರೈತರ ಮೇಲೆ ನಿಗಾ ಇಡಿ

ರಾಯಚೂರು : ಜಿಲ್ಲೆಯಲ್ಲಿ ರೈತರ ಹೊಲಗಳಲ್ಲಿ ಗಾಂಜಾ ಬೆಳೆಯುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬಂದ ಹಿನ್ನೆಲೆ ಇಂದು ಮೂರು ಇಲಾಖೆಗಳ ಜಂಟಿ ಸಭೆಯನ್ನ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್ ಮಾಡಿ ಸಮನ್ವಯತೆಯಿಂದ ಗಾಂಜಾ ಬೆಳೆ ನಿಯಂತ್ರಿಸಲು ಸೂಚನೆ ನೀಡಿದರು. ರಾಯಚೂರು ಜಿಲ್ಲೆಯಲ್ಲಿ ರೈತರು ತಮ್ಮ ಬೆಳೆಗಳ ಮಧ್ಯದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹಲವು ಕಡೆ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಒಂದು ಗಾಂಜಾ ಬೆಳೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕೃಷಿ ಇಲಾಖೆ ಮತ್ತು ಅಬಕಾರಿ ಇಲಾಖೆಯ ಸಭೆಯನ್ನು ಕರೆದು, ಈ ಒಂದು ಸಭೆಯಲ್ಲಿ ಮೂರು ಇಲಾಖೆಗಳು ಸಮನ್ವತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಕೃಷಿ ಇಲಾಖೆ ಬೆಳೆಗಳ ಸಮೀಕ್ಷೆ ಮಾಡುವಂತಹ ಸಂದರ್ಭದಲ್ಲಿ ರೈತರ ಹೊಲಗಳಲ್ಲಿ ಯಾವ ಬೆಳೆ ಹಾಲಾಗಿದೆ, ಎಂಬ ಬಗ್ಗೆ...
Local News

ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾನದ ಮಹತ್ವ ತಿಳಿಯಬೇಕು

ರಾಯಚೂರು : ದೇಶದಲ್ಲಿ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾನದ ಮಹತ್ವವನ್ನು ತಿಳಿದುಕೊಂಡು ಮತದಾನದ ಕುರಿತು ಪ್ರತಿಯೊಬ್ಬರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. 18ವರ್ಷ ಮೇಲ್ಪಟ್ಟ ಪ್ರತಿಯೋಬ್ಬರು ಮತದಾನ ಮಾಡುವ ಹಕ್ಕನ್ನು ಹೊಂದಿರುತ್ತಾರೆ. ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಈ ಭಾರಿ ವರ್ಷಕ್ಕೆ ನಾಲ್ಕು ಬಾರಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮತದಾನದ ಕುರಿತು ತಮ್ಮ ಸುತ್ತಮುತ್ತಲಿನ ಜನರಿಗೆ ಅರಿವು ಮೂಡಿಸಬೇಕಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಮತದಾರರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ, ಮತದಾನದ ಮಹತ್ವ ಹಾಗೂ ಸಂವಿಧಾನದ ಆಶಗಳನ್ನು ತಿಳಿದುಕೊಂಡು. ಸ್ಫರ್ಧಾತ್ಮಕ...
Local News

ರೈತರು ಸಾಲಕಟ್ಟೆದಿದ್ದರೆ ಕಾನೂನು ಕ್ರಮ

ರಾಯಚೂರು : ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಲ್ಲಿ 1 ಸಾವಿರಕ್ಕೂ ಹೆಚ್ಚು ರೈತರಿಗೆ ಸಾಲವನ್ನು ನೀಡಲಾಗಿದೆ. ರೈತರು ನಿಗದಿತ ಸಮಯದಲ್ಲಿ ಸಾಲ ಮರು ಪಾವತಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಸ್.ಎಲ್.ಡಿ. ಬ್ಯಾಂಕ್‌ನ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ ಹೇಳಿದರು. ರೈತರಿಗೆ ವಾರ್ಷಿಕ ಶೇ.3 ರ ಅತಿ ಕಡಿಮೆ ಬಡ್ಡಿದರದಲ್ಲಿ ಷರತ್ತುಗಳಿಗೆ ಒಪ್ಪಿ ಸಾಲ ಪಡೆದ ರೈತರು ನಿಗದಿತ ಕಾಲಕ್ಕೆ ಮರುಪಾವತಿ ಮಾಡದೇ ಹೋದರೆ ಅದು 24 ಪ್ರತಿಶತವಾಗಿ ಇದರಿಂದ ರೈತರು ಅನಾವಶ್ಯವಾಗಿ ಆರ್ಥಿಕ ತೊಂದರೆಗಳಿಗೆ ಸಿಲುಕಿಕೊಳ್ಳುವುದಲ್ಲದೆ ಇತರ ರೈತರಿಗೂ ಶೇ.3 ರ ಬಡ್ಡಿದರದಲ್ಲಿ ಸಾಲ ಸಿಗದಂತೆ ಮಾಡುತ್ತಾರೆ. ರಾಯಚೂರು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ ಮಾ.31.2022 ರ ವೇಳೆಗೆ 1179 ಸದಸ್ಯರಿಗೆ ಸಾಲ ವಿತರಿಸಿದ್ದು, 259 ಲಕ್ಷ ರೂ. ಬಾಕಿ ಬರುವುದಿದೆ ಎಂದು ಸಾಲ ವಸೂಲಾತಿ ಶೇ.10.53 ಆಗಿದೆ...
1 42 43 44 45 46 47
Page 44 of 47