This is the title of the web page
This is the title of the web page

archive#ramappa

Local News

ಹಣ ದುರ್ಬಳಕೆ, ಉಟಕನೂರು ಗ್ರಾ.ಪಂ ಪಿಡಿಓ ಅಮಾನತು

ಮಾನ್ವಿ : 15 ನೇ ಹಣಕಾಸು ಯೋಜನೆಯ ಅನುದಾನ ಹಣದುರ್ಬಳಕೆ ಮಾಡಿರುವ ಉಟಕನೂರು ಗ್ರಾ.ಪಂ ಪಿಡಿಓ ರಾಮಪ್ಪ ನಡಗೇರಿ ಇವರನ್ನು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಹೈದ್ರಾಬಾದ್ -ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎಂ.ಬಿ.ನಾಯಕ ಮಾನ್ವಿ ತಾಲೂಕಿನ ಉಟ ಕನೂರು ಗ್ರಾಮ ಪಂಚಾಯತಿಯಲ್ಲಿ ಪ್ರಸಕ್ತ ಸಾಲಿನ 15 ಪಂಚವಾರ್ಷಿಕ ಹಣಕಾಸು ಯೋಜನೆಯಲ್ಲಿ ಅಂದಾಜು 40 ಲಕ್ಷ ರೂ.ಹಣ ದುರ್ಬಳಕೆಯಾಗಲು ಗ್ರಾ.ಪಂ ಪಿಡಿಓ ರಾಮಪ್ಪ ನಡಗೇರಿ ಕಾರಣೀಕರ್ತನಾಗಿದ್ದಾನೆ. 15 ನೇ ಹಣಕಾಸು ಯೋಜನೆಗೆ ಸಂಬಂಧಪಟ್ಟಂತೆ ಪಿಡಿಓ ರಾಮಪ್ಪ, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷ ರಾಗಿ ಹಾಗೂ ಸದಸ್ಯರು ಯಾವುದೇ ಕ್ರಿಯಾ ಯೋಜನೆ ರೂಪಿಸದೇ ಅಂದಾಜು 40 ಲಕ್ಷ ರೂ.ಹಣ ವಿವಿಧ ಏಜೇನ್ಸಿ ಹಾಗೂ ವೆಂಡರುಗಳ ಹೆಸರಿಗೆ ವರ್ಗಾವಣೆ ಮಾಡಿರುವ ದಾಖಲೆಗಳನ್ನು ಮಾಹಿತಿ ಹಕ್ಕು ಮೂಲಕ ಪಡೆದು ಪರಿಶೀಲಿಸಿದಾಗ ಯಾವುದೇ ಕಾಮಗಾರಿ ಮಾಡದೇ ಹಣ ಕ೦ಡುಬಂದಿದೆ....