ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಧ್ಯಕ್ಷ ಕಿರಣ್ ಕುಮಾರ್ ತಡಕಲ್ ಮಾತನಾಡಿ ಬೆಳಗಾವಿಯಲ್ಲಿ ಡಿ.19ರಂದು ಚಳಿಗಾಲದ ಅಧಿವೇಶನಗಳು ನಡೆಯಲಿದ್ದು ಸದನದಲ್ಲಿ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಕೇಂದ್ರ ಸರಕಾರದಿಂದ 341(3) ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕೆ ತಿದ್ದಪಡಿ ತರಬೇಕು, ಮೀಸಲಾತಿ ಹೆಚ್ಚಿಸಿರುವ ರಾಜ್ಯಸರಕಾರದ ಪ್ರಸ್ತವನೆಯನ್ನು ಕೇಂದ್ರವು ಒಪ್ಪಿ ಶೇ17 ಮೀಸಲಾತಿಯನ್ನು ಅನುಷ್ಟಾನಗೊಳಿಸಬೇಕು, ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದಪಡಿ ತರಬೇಕು, ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಕಾಯ್ದೆಯ ಕ್ಲಾಸ್ 7ಡಿ ಯನ್ನು ರದ್ದು ಪಡಿಸಬೇಕು ಹಾಗೂ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳ್ಳಿಸುವಂತೆ ಒತ್ತಾಯಿಸಿ ಬೆಳಗಾವಿ ಚಲೋ ಸಾಮಾಜಿಕ ನ್ಯಾ ಸಂಕಲ್ಪ ರ್ಯಾಲಿಯನ್ನು ಡಿ.20ರಂದು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಿಂದ ಸುವರ್ಣ ಸೌಧದವರೆಗೆ ನಡೆಯಲಿದೆ ಎಂದು ತಿಳಿಸಿದರು. ತಾ.ಅಧ್ಯಕ್ಷ ಮಾರೆಪ್ಪ ಮಳ್ಳಿ ಮಾತನಾಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ...
ರಾಯಚೂರು : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಎಂ.ವಿರುಪಾಕ್ಷಿ ಹೇಳಿದರು. ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರಿದಿದೆ.ಒಳಮೀಸಲಾತಿ ವಿಚಾರವಾಗಿ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಹಲವು ಮಾದಿಗ ಸಂಘಟನೆಗಳು ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಪಟ್ಟಂತೆ ಸರಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಈಗ ನಾವು ಅಂತಿಮ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಬೆಂಗಳೂರಿನ ಡಿ. 11 ರಂದು 4 ರಿಂದ 5 ಲಕ್ಷ ಜನ ಸೇರಿ ದೊಡ್ಡ ಸಮಾವೇಶ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಿದ್ದೇವೆ. ಡಿ. 11 ರಿಂದ ಡಿ.31 ರವರೆಗೆ...