K2 ಕ್ರೈಂ ನ್ಯೂಸ್ : ಟ್ಯಾಂಕರ್ ಮತ್ತು ಟಂಟಂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಒಂದೇ ಕುಟುಂಬದ 6(six) ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಲಕರ್ಟಾ ಗ್ರಾಮದ ಬಳಿ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಾ ಬಳಿ ಭೀಕರ ರಸ್ತೆ ಅಪಘಾತ (Road Accident) ನಡೆದಿದಿದ್ದು. ಘಟನೆಯಲ್ಲಿ ನಜ್ಮಾ ಬೇಗಂ(28), ಬಿಬಿ ಫಾತೀಮಾ(12) , ಅಬುಬಕರ್(4), ಬಿಬಿ ಮರಿಯಮ್ಮ(5 ತಿಂಗಳು), ಮಹ್ಮದ್ ಪಾಶಾ(20), ಆಟೋ ಚಾಲಕ ಬಾಬಾ(35) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮಹಮದ್ ಹುಸೇನ್ ಎಂಬ ಬಾಲಕನಿಗೆ ಗಂಭಿರ ಗಾಯವಾಗಿದ್ದು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರು ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳೆಂದು ಎಂದು ತಿಳಿದು ಬಂದಿದೆ.
ಟಂಟಂ ಆಟೋ ಮೂಲಕ ಆಧಾರ ಕಾರ್ಡ್ ತಿದ್ದುಪಡಿಗೆ ಚಿತ್ತಾಪುರಕ್ಕೆ ಹೋಗಿ ವಾಪಸ್ಸಾಗುತ್ತಿದ್ದಾಗ ಬೂದಿ ತುಂಬಿದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆರು ಮಂದಿ ಸ್ಥಳದಲ್ಲೆ ಉಸಿರು ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಟ್ಯಾಂಕರ್ ಬಿಟ್ಟು ಪರಾರಿ ಆಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಾಡಿ(wadi police) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
[ays_poll id=3]