ಬಸ್ ಅಪಘಾತ ಪ್ರಕರಣ : ಸರ್ಕಾರ ಎಚ್ಚೆತ್ತು ಕೆಲಸ ಮಾಡಲು ನಿರ್ದೇಶನವಾಗಿದೆ

K 2 Kannada News
ಬಸ್ ಅಪಘಾತ ಪ್ರಕರಣ : ಸರ್ಕಾರ ಎಚ್ಚೆತ್ತು ಕೆಲಸ ಮಾಡಲು ನಿರ್ದೇಶನವಾಗಿದೆ
Oplus_131072
WhatsApp Group Join Now
Telegram Group Join Now

K2kannadanews.in

Accident News ಮಾನ್ವಿ : ಸಾರಿಗೆ ಬಸ್ ಮತ್ತು ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಮೃತಪಟ್ಟಣಿ ವಿಚಾರಕ್ಕೆ ಸಂಬಂದಿಸಿದಂತೆ ಕುರ್ಡಿ ಗ್ರಾಮಕ್ಕೆ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಚೆಕ್ ವಿತರಿಸಿ, ಸಾಂತ್ವಾನ ಹೇಳಿದರು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರುಡಿ ಗ್ರಾಮಕ್ಕೆ ಭೇಟಿ ನೀಡಿ ಸಚಿವರು ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕುಟುಂಬ ಸಾಕಷ್ಟು ದುಃಖದಲ್ಲಿದೆ, ಆ ದುಖಃ ಬರಿಸುವ ಶಕ್ತಿ ದೇವರು ನೀಡಲಿ, ಕುಟುಂಬಕ್ಕೆ ದೊಡ್ಡ ಅನ್ಯಾಯವಾಗಿದೆ. ಹಾಗಾಗಿ ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೂ ಕೂಡ ಉಚಿತವಾಗಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆಯನ್ನು ಸರ್ಕಾರದಿಂದ ಮಾಡಿದ್ದೇವೆ. ಸರ್ಕಾರದ ವತಿಯಿಂದ ಪರಿಹಾರ ನೀಡಿದ್ದೇವೆ. ಪರಿಹಾರ ನೀಡಿದ ಮಾತ್ರಕ್ಕೆ ಜೀವ ವಾಪಸ್ ತರಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಇಂತಹ ಘಟನೆ ಮರುಕಳಿಸುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article