K2kannadanews.in
Accident News ರಾಯಚೂರು : ಬೈಕ್ ಮತ್ತು ಕಾರ್ ನಡುವೇ ಭೀಕರ ಅಪಘಾತ ಜರುಗಿ ಬೈಕ್ ಸಾವರರಿಬ್ಬರು ಮೃತಪಟ್ಟ ಘಟನೆ ರಾಯಚೂರು ವಿಶ್ವವಿದ್ಯಾಲಯ ಬಳಿ ನಡೆದಿದೆ.
ಹೌದು ರಾಯಚೂರು ತಾಲ್ಲೂಕಿನ ಯರಗೇರಾ ಗ್ರಾಮದ ಬಳಿಯ ರಾಯಚೂರು ವಿಶ್ವವಿದ್ಯಾಲಯ ಬಳಿ ನಡೆದಿದ್ದು, ಘಟನೆಯಲ್ಲಿ ಸ್ಥಳದಲ್ಲೆ ಓರ್ವ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮತ್ತೋರ್ವ ಸವಾರ ಮೃತಪಟ್ಟಿದ್ದಾನೆ. ಉರುಕುಂದ(42), ಲಕ್ಷ್ಮಣ(45) ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಯರಗೇರಾ ಕಡೆ ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ. ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.