K2kannadanews.in
Suicide News ರಾಯಚೂರು : ಒಂದೇ ಕುಟುಂಬದ 3 ಜನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಪತ್ನಿ ಮೃತಪಟ್ಟು, ಮಗಳಿಗೆ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹೊರವಲಯದ ಯರಮರಸ್ ಬಳಿ ನಡೆದಿದೆ.
ರಾಯಚೂರು ನಗರದ ಯರಮರಸ್ ರೈಲ್ವೆ ಹಳಿಯಲ್ಲಿ ಘಟನೆ ನಡೆದಿದೆ. ಪತಿ ಶಬ್ಬಿರ್ ಅಹಮ್ಮದ್ (45), ಪತ್ನಿ ಜುಲೆಕಾನ್ (35) ಬೇಗಂ ಸ್ಥಳದಲ್ಲೇ ಮೃತಪಟ್ಟಿದ್ದು, ಮಗಳು ಮೈಮುನ್ (21) ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಗಾಯಗೊಂಡ ಬಾಲಕಿಯನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಿ ಮುಂದಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ವರ್ಗಾಯಿಸಲು ಸೂಚಿಸಲಾಗಿದೆ.
ಇನ್ನು ಇಡಿ ಕುಟುಂಬ ಆತ್ಮಹತ್ಯೆಗೆ ಮುಂದಾಗಿದ್ದರ ಬಗ್ಗೆ ಕಾರಣ ತಿಳಿದು ಬಂದಿಲ್ಲ. ಪ್ರಸ್ತುತ ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ಮಾಡಿ ಶವ ಪರೀಕ್ಷೆಗಾಗಿ ಎರಡು ಶವಗಳನ್ನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
[ays_poll id=3]