ಭೀಕರ ಅಪಘಾತ ಇಬ್ಬರು ಸಾವು
![]() |
![]() |
![]() |
![]() |
![]() |
ರಾಯಚೂರು : ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಘಟನೆ ಸಂಭವಿಸಿದೆ. ಮೃತರನ್ನು ಶರತ್, ಪ್ರವೀಣ್ ಎಂದು ಗುರುತಿಸಲಾಗಿದೆ. ರಾಯಚೂರು ನಗರದ ಮಡ್ಡಿಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಯರಗೇರಾದಿಂದ ಬೈಕ್ ಸವಾರರು ರಾಯಚೂರು ಕಡೆ ಬರುವಾಗ, ರಾಯಚೂರಿನಿಂದ ಮಂತ್ರಾಲಯಕ್ಕೆ ಹೋಗುವಾಗ ಮಾರ್ಗಮಧ್ಯ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ತನಿಖೆ ಮುಂದುವರೆಸಿದ್ದಾರೆ.
![]() |
![]() |
![]() |
![]() |
![]() |