K2 ನ್ಯೂಸ್ ಡೆಸ್ಕ್ : ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟ ಘಟನೆ ಇಟ್ಟಿಗಟ್ಟಿ ಬಳಿ ನಡೆದಿದೆ.
ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದ್ದು, ಹುಚ್ಚೇಶ ಹಿರೇಗೌಡರ (37) ಮೃತ ಕ್ಯಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಹಿಂಬದಿ ಕುಳಿತಿದ್ದ ಮಹಿಳಾ ಕಾನ್ಸ್ಟೇಬಲ್ ಲಕ್ಷ್ಮೀ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಗಣೇಶೋತ್ಸವ ಬಂದೋಬಸ್ತ್ಗೆ ತೆರಳಿದ್ದ ಸಿಬ್ಬಂದಿ, ಡ್ಯೂಟಿ ಮುಗಿಸಿ ಮರಳಿ ಬರುವಾಗ ಅಪಘಾತವಾಗಿದೆ. ಎದುರಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ನಿಲ್ಲಿಸದೆ ಹೋಗಿದೆ. ಗಾಯಾಳು ಲಕ್ಷ್ಮೀ ಹುಬ್ಬಳ್ಳಿ ಕಿಮ್ಸ್ಗೆ ರವಾನಿಸಲಾಗಿದ್ದು, ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
[ays_poll id=3]