K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಫಟಾ ಫಟ್ ಇಡೀ ದಿನದ ರಾಯಚೂರು ಸುದ್ದಿಗಳು ವೀಕ್ಷಿಸಿ..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಫಟಾ ಫಟ್ ಇಡೀ ದಿನದ ರಾಯಚೂರು ಸುದ್ದಿಗಳು ವೀಕ್ಷಿಸಿ..
WhatsApp Group Join Now
Telegram Group Join Now

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್‌ಗಳ ಮೇಲೆ ಅವೈಜ್ಞಾನಿಕವಾಗಿ ಮಾರಾಟ ತೆರಿಗೆ ವಿಧಿಸಿರುವದನ್ನು ಹಿಂಪಡೆಯುವಂತೆ ಒತ್ತಾಯಿಸಿ ಜೂನ್ 21 ಶುಕ್ರವಾರದಂದು ಜಿಲ್ಲಾ ಮತ್ತು ಮಂಡಲಗಳ ಹಂತದಲ್ಲಿ ಭಾರತೀಯ ಜನತಾ ಪಕ್ಷ ರಸ್ತೆ ತಡೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾ ಧ್ಯಕ್ಷ ಹಾಗೂ ಶಾಸಕ ಡಾ. ಶಿವರಾಜ ಪಾಟೀಲ್ ಹೇಳಿದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುರುವಾರದಂದು ಸಿಂಧನೂರು ನಗರದಲ್ಲಿ ರಸ್ತೆ ತಡೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ ಎಂದು ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.

ಸರ್ಕಾರಿ ವೈಧ್ಯಕೀಯ ಕಾಲೇಜು (ರಿಮ್ಸ್)ಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಅಕ್ರಮಗಳು ನಡೆಯುತ್ತಿದ್ದು, ವೈಧ್ಯಕೀಯ ಶಿಕ್ಷಣ ಸಚಿವರು ಯಾವುದೇ ಕ್ರಮಕ್ಕೆ ಮುಂದಾಗದೇ ಇರುವದರಿಂದ ಮುಖ್ಯಮಂತ್ರಿಗಳ ದೂರು ನೀಡಲು ನಿರ್ಧರಿಸಿರುವುದಾಗಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಜು ಪಟ್ಟಿ ಹೇಳಿದರು.

ಅಂಗನವಾಡಿಗಳಲ್ಲಿ ಎಲ್‌ಕೆಜಿ ಯುಕೆಜಿ ಆರಂಭಿಸದೇ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲು ಹೊರಡಿಸಿರುವ ಆದೇಶ ಖಂಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವತಿಯಿಂದ ನಗರದ ವಾಲ್ಮೀಕಿ ವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Share This Article