K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಕನಸು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್‌ನಿಂದ ಜೂ.26 ರಂದು ಒಂದು ದಿನ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ಕಾರ್ಯಾಗಾರ ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅದ್ಯಕ್ಷ ರವಿಚಂದ್ರ ಗೋನವಾರ ಹೇಳಿದರು.

ಮಹಿಳಾ ಸಾಂತ್ವಾನ ಕೇಂದ್ರದ ಕಟ್ಟಡ ಮೇಲಿಂದ ಬಿದ್ದು ಯುವತಿ ಮೃತಪಟ್ಟ ಘಟನೆ ರಾಯಚೂರು ನಗರದಲ್ಲಿ ನಡೆದಿದ್ದು, ಪ್ರಿಯಕರ ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ರಾಯಚೂರು ನಗರದ ದೇವರ ಕಾಲೋನಿಯಲ್ಲಿನ ಸಾಂತ್ವಾನ ಕೇಂದ್ರದಲ್ಲಿ ಘಟನೆ ನಡೆದಿದೆ.

ಹೇಮರೆಡ್ಡಿ ಮಲ್ಲಮ್ಮ ಜಯಂತಿ ರಾಯಚೂರು ನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ಬಸವೇಶ್ವರ ವ್ರತದಿಂದ ಅಂಬೇಡ್ಕರ್ ಭತ್ತದ ಮುಖಾಂತರ ರಂಗಮಂದಿರ ಬಾರಿಗೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರ ಮೆರವಣಿಗೆ ಮೂಲಕ ತರಲಾಯಿತು. ಒಂದು ಮೆರವಣಿಗೆಗೆ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಚಾಲನೆ ನೀಡಿದರು.

ಪ್ರೀತಿ ನಂಬಿ ಪ್ರೀತಿಸಿದ ಹುಡುಗನ ಮೇಲೆ ನಂಬಿಕೆ ಇಟ್ಟು ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವತಿಗೆ, ಕೊನೆಗೆ ಪ್ರಿಯಕರ ಮತ್ತು ಕುಟುಂಬದಿಂದ ಅನ್ಯಾಯವಾಗಿ ವಿಧಿಯಿಲ್ಲದೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ. ರಾಯಚೂರು ನಗರದ ದೇವರ ಕಾಲೋನಿಯಲ್ಲಿನ ಸಾಂತ್ವಾನ ಕೇಂದ್ರದಲ್ಲಿದ್ದ 18 ವರ್ಷದ ಯುವತಿ ಆತ್ಮಹತ್ಯೆ ಮಾಡಕೊಂಡಿದ್ದಾಳೆ.

WhatsApp Group Join Now
Telegram Group Join Now
Share This Article