K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ರಾಯಚೂರು (Raichur) ನಗರಸಭೆಯಿಂದ ವೇತನ (salary) ಪಾವತಿ ಬಾಕಿಯಿಂದ ಬೇಸತ್ತು, ವಿದ್ಯುತ್ ನಿರ್ವಹಣಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆ (Suicide) ಯತ್ನಿಸಿದ (attempt) ಪ್ರಕರಣ ಬೆಳಕಿಗೆ ಬಂದಿದೆ. ನಗರಸಭೆ ಇತಿಹಾಸದಲ್ಲಿ ವೇತನ ಬಾಕಿ ಪಾವತಿ ಹಿನ್ನೆಲೆಯಲ್ಲಿ ಆತ್ಮಹತ್ಯೆ ಯತ್ನ ಮೊಟ್ಟ ಮೊದಲ ಘಟನೆ ಇದಾಗಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಹಿರಿಯ ಸಾಹಿತಿಗಳಾದ ಲಕ್ಷ್ಮೀದೇವಿ ಶಾಸ್ತ್ರಿ ಅವರ ಚಾಗಿ ಹಿರೇಮಠದ ಚನ್ನಬಸವ ಶಾಸ್ತ್ರಿಗಳ ದರ್ಶನ ಕೃತಿ ಲೋಕಾರ್ಪಣೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಇನ್ಫೋಸಿಸ್ ಅಭಿಯಂತರರಾದ ವಿಶ್ವನಾಥ್ ಶಾಸ್ತ್ರಿ ಹೇಳಿದರು.

ಶ್ರೀ ನಾರದಗಡ್ಡೆ ಚನ್ನಬಸವೇಶ್ವರ ಸ್ವಾಮಿ ಸಂಸ್ಥಾನ ಮಠ ಬುದ್ದಿಪಾಡ್ ಆಸ್ತಿ -ಸ್ಥಿರಸ್ತಿ ಹಾಗೂ ಪೀಠಾಧಿಪತಿಗಳ ಕುರಿತು ದಿನಾಂಕ 10 ರಂದು ಮುಂಜಾನೆ 11 ಗಂಟೆಗೆ ಸಾರ್ವಜನಿಕರ ಹಾಗೂ ಅಧಿಕಾರಿಗಳ ಜಂಟಿ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷರಾದ ನರಸಿಂಹ ನಾಯಕ ಕಮಲಾ ಪುರ ಹೇಳಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯು ದಿ 13 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮೂಲಕ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಶೀಘ್ರ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ ಎಂದು ಹೋರಾಟ ಸಮಿತಿಯ ಮುಖಂಡರಾದ ಹನುಮಂತಪ್ಪ ಮನ್ನಾಪುರ ಹೇಳಿದರು.

ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಶ್ರೀ ಮಹರ್ಷಿ ಭಗೀರಥ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಆದಿರಾಜ ಆದೋನಿ ಹೇಳಿದರು.

WhatsApp Group Join Now
Telegram Group Join Now
Share This Article