K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯರ, ಆಯ್ಕೆಗೆ ಜಿಲ್ಲೆಯಲ್ಲಿ ಆ.25 ರಂದು ಮತದಾನ ಬದಲಾವಣೆಯಾಗಿದ್ದು, ನೂತನ ಸ್ಥಳ ನಗರದ ಬಸವೇಶ್ವರ ಬಡಾವಣೆಯ ಲಯನ್ಸ್ ಪ್ರೌಢಶಾಲೆ ಕೆ. ಹೆಚ್ ಬಿ ಕಾಲೋನಿಯಲ್ಲಿ ನಡೆಯಲಿದೆ ಎಂದು, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಮಿರ್ಜಾಪೂರು ಹೇಳಿದರು..

ಪ್ರಚಲಿತ ಸನ್ನಿವೇಶ ಮತ್ತು ಗ್ರಾಮೀಣ ಪ್ರದೇಶದ ಜನ ಜೀವನ ಆಧಾರದ ಮೇಲೆ ರಚನೆಗೊಂಡ, ಹನುಮಂತ ಬ್ಯಾಗವಾಟ ಅವರ ನಿರ್ದೇಶನದ, ರೈತನ ದ್ವನಿ ಕಿರುಚಿತ್ರ ಬಿಡುಗಡೆ ದಿ.27ರಂದು ಸಂಜೆ 5.45 ಕ್ಕೆ, ಭೀಮನಾದ 27 ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಲಿದೆ ಎಂದು ನಿರ್ದೇಶಕ ಹನುಮಂತ ಬ್ಯಾಗವಾಡ ಅವರು ಹೇಳಿದರು..

ಕೌಟುಂಬಿಕ ಕಲಹ ಕಾರಣಕ್ಕೆ ಅಜ್ಜಿ ಮತ್ತು ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಪತಿಯನ್ನು ಮುದುಗಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಸೆರೆ ಹಿಡಿಯಲಾಗಿದೆ. ಘಟನೆಯು ಲಿಂಗಸೂಗೂರು ತಾಲೂಕಿನ ಮುದುಗಲ್ ಪಟ್ಟಣದಲ್ಲಿ ನಡೆದಿದೆ.

ಯಲಬುರಗ ತಾಲೂಕಿನ ಸಂಗನಾಳ ಗ್ರಾಮದಲ್ಲಿ, ದಲಿತ ಯುವಕನನ್ನು ಕೊಲೆ ಮಾಡಿರುವ ಅಪರಾಧಿಗೆ ಕಠಿಣ ಶಿಕ್ಷೆ ನೀಡಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಬಿ.ಆರ್.ಅಂಬೇಡ್ಕರ ಸೇನಾ ಸಮಿತಿ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಅಂಗಸೂಗೂರು ತಾಲೂಕಿನ‌ ಮುದಗಲ್ ಪುರಸಭೆ ವ್ಯಾಪ್ತಿಯ ವಾರ್ಡ ನಂ.16 ರಲ್ಲಿ ಬರುವ 15 ಜನ ಮಾಜಿ ದೇವಸಾಸಿ ಮಹಿಳೆ‌ಯರಿಗೆ ನಿವೇಶನ ಮಂಜೂರು ಮಾಡಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವ‌ದಾಸಿ ಮಹಿಳಾ ವಿಮೋಚನಾ ಸಂಘ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Share This Article