K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ಜಿಲ್ಲಾ ಯಾದವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಕೃಷ್ಣ ಜನ್ಮಾಷ್ಟಮಿ ಉತ್ಸವ ಹಾಗೂ ಜಾತ್ರಾ ಮಹೋ ತ್ಸವ ದಿ.26 ರಿಂರ 28 ವರೆಗೆ ಎರಡು ದಿನ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಕೆ. ಹನುಮಂತಪ್ಪ ಅವರು ಹೇಳಿದರು. ಅವರಿಂದು ನಗರದ ಸುದ್ದಿಗಾರರೊಂದಿಗೆ ಮಾತ ನಾಡುತ್ತಾ, ಪ್ರತಿ ವರ್ಷ ಮಾದರಿಯಲ್ಲಿ ಈ ವರ್ಷ ಅತ್ಯಂತ ಅದ್ದೂರಿ ಯಾಗಿ ಆಚರಣೆಗೆ ಸದ್ದತೆ ಮಾಡಿಕೊಳ್ಳಲಾಗಿದೆ ಎಂದರು.

ಕೊಲ್ಕತ್ತಾ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸ ಬೇಕು ಎಂದು ಆಗ್ರಹಿಸಿ ಮೌನ ಪ್ರತಿಭಟನೆ ನಡೆಯಿತು. ಪೂರ್ಣಿಮಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಬಿಜೆಪಿ ಮಹಿಳಾ ಮೋರ್ಚಾ, ಇರ್ನರ್ ವಿಲ್ ಕ್ಲಬ್, ರಿಮ್ಸ್ ವೈದ್ಯ ಕೀಯ ವಿದ್ಯಾರ್ಥಿ ಸಂಘ, ಬಸವ ಕೇಂದ್ರ ಸೇರಿ ಸಂಘಟನೆಗಳ‌12 ಬೃಹತ್ ಮೌನ ಪ್ರತಿಭಟನೆ ಮಾಡಲಾಯಿತು.

ವೈಶ್ಯವಾಟಿಕೆ ದಂಧೆಯಲ್ಲಿ ತೊಡಗುವಂತೆ ಮಹಿಳೆಯರನ್ನು ಬಲವಂತವಾಗಿ ಕಿರುಕುಳ ನೀಡುವರರ ವಿರುದ್ಧ ವೈಶ್ಯವಾಟಿಕೆ ಕಾಯ್ದೆಯ ಪರಿಣಾಮಕಾರಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಿರಿಯ ಶ್ರೇಣಿ ದಿವಾನಿ ನ್ಯಾಯದೀಶ ಹೆಚ್ ಎ.ಸಾತ್ವಿಕ್ ಎಲ್ ಎಲ್ ಎಂ ಹೇಳಿದರು.

ರಾಯಚೂರು ತಾಲ್ಲೂಕಿನ ಗಾಣದಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ 25 ರಂದು, ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಬೃಹತ್ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಒಂದು ಶಿಬಿರ ಆಯೋಜನೆ ಮಾಡಲಾಗಿದೆ.

WhatsApp Group Join Now
Telegram Group Join Now
Share This Article