K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ಶಿಕ್ಷಕರ ದಿನಾಚಣೆ (Teacher’s day) ಹಿನ್ನೆಲೆ ಖುಷಿಯಿಂದ (Happy) ಹೊರಟಿದ್ದ ವಿದ್ಯಾರ್ಥಿಗಳು (Students), ಜವರಾಯನ ಪಾದ ಸೇರಿದ ದುರ್ಘಟನೆಯೊಂದು ರಾಯಚೂರು (Raichur) ಜಿಲ್ಲೆಯಲ್ಲಿ ಜರುಗಿದೆ. ಶಾಲೆಗೆ ಹೋದ ಮಕ್ಕಳು, ಶವವಾದ ಮಾಹಿತಿ ತಿಳಿದ ಪೊಷಕರ ಆಕ್ರಂದನ ಮುಗಿಲು ಮುಟ್ಟಿತ್ತು, ಘಟನೆಗೆ ಸ್ಪಂದಿಸಿದ ಸಿಎಂ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ..

ಆದರ್ಶ ಸಾಮಾಜಿಕ ಮತ್ತು ಶೈಕ್ಷಣಿಕ ಟ್ರಸ್ಟ್ ಹೆಸರಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ಸಂಬಂಧಸಿ ವಿಧಾನಪರಿಷತ್(MLC) ವಿರೋಧ ನಾಯಕ ಸದಸ್ಯರಾದ ಟಿ. ನಾರಾಯಣಸ್ವಾಮಿ ಸದಸ್ಯತ್ವ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ (KPPC) ಕಾರ್ಯಸಮಿತಿ ಸದಸ್ಯರಾದ ಕೆ. ಈ. ಕುಮಾರ ಅವರು ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ..

ನಗರದ ಪ್ರದೇಶದಲ್ಲಿ ಹದಗೆಟ್ಟ ರಸ್ತೆ ದುರಸ್ಥಿ ಸೇರಿ ಕಳೆದ ಎರಡು ದಿನಗಳಿಂದ ಭಾರಿ ಮಳೆಗೆ ಚರಂಡಿ ತುಂಬಿ ನೀರು ರಸ್ತೆ ಮೇಲೆ ಹರಿಯು ತಿರುವ ಪರಿಣಾಮ ಸಾಂಕ್ರಾಮಿಕ ರೋಗ ಬರದಂತೆ ತಡೆಹಿಡಿಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ರಂಗಮಂದಿ ರದಲ್ಲಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋ ಜಿಸಿದ ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ 137ನೇ ಜನ್ಮದಿನೋತ್ಸವ ಹಿನ್ನಲೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಗರದ ಆಯ್ಕೆಹಾಳ್ ವಾರ್ಡ್ ನಂ 34 ರಲ್ಲಿ ಮನೆಗಳಿಗೆ ನಳದ ನೀರು ಸೇರಿ ಶುದ್ದ ಕುಡಿಯುವ ನೀರು ಪೂರೈಕೆ ಮತ್ತು ರಸ್ತೆ ದುರಸ್ಥಿ ಮಾಡು ವಂತೆ ಆಗ್ರಹಿಸಿ ಪ್ರಗತಿಪರ ಕರ್ನಾ ಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಯೂನಿಯನ್ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಆಲ್ ಇಂಡಿಯಾ ಡೆಮಾಕ್ರೆ ಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ಇಡೀ ದೇಶದಾದ್ಯಂತ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿbಮಾಡಬೇಕು ಹಾಗೂ ಇನ್ನಿತರ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಸಹಿ ಸಂಗ್ರಹ ಚಳುವ ಳಿಯನ್ನು ಹಮ್ಮಿಕೊಳ್ಳಲಾಗಿದೆ.

WhatsApp Group Join Now
Telegram Group Join Now
Share This Article