K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ನಗರದ ರಿಮ್ಸ್ ಆಸ್ಪತ್ರೆಗೆ (RIMS Hospital) ಇಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ (Incharge minister) ಡಾ.ಶರಣು ಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ, ಅಪಘಾತದಲ್ಲಿ (Accident) ಗಾಯಗೊಂಡ ವಿದ್ಯಾರ್ಥಿಗಳ (Students) ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರುಗಳಿಗೆ (Doctors) ಸೂಚಿಸಿದರು.

ರಾಜ್ಯ ಸರಕಾರ ಒಳಮೀಸಲಾತಿ ತಕ್ಷಣವೇ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಸೇ
ಸೆ.12 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಬೃಹತ್‌ ತಮಟೆ ಚಳುವಳಿ ನಡೆಯಲಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮತಿ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್ ಅವರು ಹೇಳಿದರು.

ಮಾನವಿ ತಾಲೂಕಿನ ಕುರ್ಡಿ ಹೋಬಳಿಯಲ್ಲಿ ನಡೆದ ಲೋಯಲಾ ಶಾಲೆಯ ಬಸ್ ಅಪಘಾತದಲ್ಲಿ ಶಾಶ್ವತ ಅಂಗವಿಕಲರಾದ ಮಕ್ಕಳಿಗೆ 20 ಲಕ್ಷ ಪರಿಹಾರ ನೀಡಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂಟ ಮುಖಂಡರು ಜಿಲ್ಲಾಧಿಕಾರಿ ಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಖಾಸಗಿ ಶಾಲಾ ವಾಹನ ಅಪಘಾತದಲ್ಲಿ ಮೃತಪಟ್ಟ ಕೂಡಿ ಗ್ರಾಮದ ವಿದ್ಯಾರ್ಥಿಗಳ ನಿವಾಸಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣು ಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿ ಸರ್ಕಾರದ ವತಿಯಿಂದ ನೀಡಲಾದ 5 ಲಕ್ಷ ಪರಿಹಾರ ಚೆಕ್ಕನ್ನು ಹಸ್ತಾಂತರಿಸಿದರು.

ನವಯುಗ ಪದವಿ ಪದವಿ ಪೂರ್ವ ಮಹಾವಿದ್ಯಾಲಯ ರಾಯ ಚೂರು ಇವರುಗಳ ಸಂಯುಕ್ತಾಶ್ರ ಯದಲ್ಲಿ ದಿ.06 ರಂದು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

WhatsApp Group Join Now
Telegram Group Join Now
Share This Article