K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ನಿವೃತ್ತ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅ 1 ರಂದು ವಿಶ್ವ ಹಿರಿಯ ನಾಗರಿಕ ದಿನಾ ಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸ ಲಾಗುತ್ತದೆ ಎಂದು ಕರ್ನಾಟಕ ನೂತನ ನೌಕರರ ವೇದಿಕೆ ರಾಜ್ಯ ಸಂಚಾಲಕರಾದ ಶಂಕರಪ್ಪ ಲಮಾಣಿ ಹೇಳಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಒಂದು ಕೋಟಿ ಅನುದಾನ ನೀಡಿ ವರ್ಷ ಕಳೆದರೂ ಇನ್ನೂವರೆಗೂ ಕೋಟೆ ಅಭಿವೃದ್ಧಿ ಕಾರ್ಯ ಕೈಗೊಳ್ಳ ದಿರುವ ಬಗ್ಗೆ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸ ರಾಜು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಜಯ ಪಾಲಿ ಕ್ಲಿನಿಕ್ ಮತ್ತು ನರ್ಸಿಂಗ್‌ ಹೋಮ್ ವತಿಯಿಂದ ದಿ 29 ರಂದು ಹೃದಯ ದಿನಾಚರಣೆ ಅಂಗವಾಗಿ ಕ್ರಿಯೆಗಾಗಿ ಹೃದಯ ವನ್ನು ಬಳಸಿ ಎನ್ನುವ ಸಂದೇಶ ದೊಂದಿಗೆ ಉಚಿತ ಆರೋಗ್ಯ ಶಿಬಿರ ಆಯೋಜಿಸಲಲಾಗುತ್ತದೆ ಎಂದು ಹೃದ್ರೋಗ ತಜ್ಞರಾದ ಡಾ. ಅಜಿತ್ ವಿ ಕುಲಕರ್ಣಿ ಅವರು ಹೇಳಿದರು.

ದೇವದುರ್ಗ ತಾಲೂಕಿನ ಗಟ್ಟೂರು ಹೋಬಳಿಯ ಹೇಮನಾಳ ಪಂಚಾಯತ ವ್ಯಾಪ್ತಿಗೆ ಬರುವ ಹೊನ್ನಟಗಿ ಗ್ರಾಮ ಬರಿ ಸರಕಾರದ ಪಟ್ಟಿಯಲ್ಲಿ ಮಾತ್ರ ಆದರ್ಶ ಗ್ರಾಮ ಸಂಪೂರ್ಣ ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿದ್ದು ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಕೊಳ್ಳಲು ಒತ್ತಾಯಿಸಿದರು.

ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಶುಕ್ರವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Share This Article