K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ತುಂಗಭದ್ರ ಮತ್ತು ನಾರಾಯಣ ಪುರು ಬಲದಂಡೆ ಕಾಲುವೆ ಸಮಸ್ಯೆಗಳು ಪರಿಹರಿಸಲು, ಉಸ್ತುವಾರಿ ಸಚಿವರುಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರೂ, ಯಾವುದೇ ಕ್ರಮ ಕೈಗೊಳ್ಳದೇ ಎಡದಂಡೆ ಕೊನಭಾಗಕ್ಕೆ, ನೀರು ತಲುಪದೇ ಇರುವದರಿಂದ ಅ.4 ರಂದು ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ ಹೇಳಿದರು.

ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ರಸ್ತೆ ಕಾಮಗಾರಿಯನ್ನು ಒಂದು ವಾರದಲ್ಲಿ ಆರಂಭಿಸದಿದ್ದರೆ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ.

ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ವತಿಯಿಂದ ನರೇಗಾ ಯೋಜನೆಯ ನಿಗದ ಬೇಡಿಕೆಗಳನ್ನ ಈಡೇರಿಸಲು ಒತ್ತಾಯಿಸಿ ದೇಶದ ಪ್ರಧಾನಿಗೆ ಪತ್ರ ಬರೆಯುವ ಮೂಲಕ ಪತ್ರ ಚಳುವಳಿ ಮಾಡಿದರು.

ದರ್ವೇಶ್ ಕಂಪನಿಯ ಬಹು ಕೋಟಿ ಹಗರಣ ಪ್ರಕರಣದ ತನಿಖೆ ಸಿಓಡಿ ವಿಳಂಬ ಮಾಡುತ್ತಿದ್ದು, ಹೂಡಿಕೆದಾರರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಸಾಧ್ಯವಾಗದಿದ್ದರೆ ಈ ಪ್ರಕರಣ ವನ್ನು ಸಾರ್ವಜನಿಕ ಹಿತಾಸಕ್ತಿಯಿಂದಾಗಿ ಇ.ಡಿ, ಸಿಬಿಐ ಅಥವಾ ಐ.ಟಿ ಸಂಸ್ಥೆಗಳ ತನಿಖೆಗೆ ಒಪ್ಪಿಸಲು ಹೂಡಿಕೆದಾರರು ಒತ್ತಾಯಿಸಿದರು.

WhatsApp Group Join Now
Telegram Group Join Now
Share This Article