K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಹೆಚ್ಚಿನ ಬಡ್ಡಿ ಆಸೆ ತೋರಿಸಿ ನೂರಾರು ಜನರು ಹಣ ಹೂಡಿಕೆ ಮಾಡುವಂತೆ ಮಾಡಿ, ದರ್ವೇಶ ಗ್ರೂಪ್ ಕಂಪನಿಯ ಮಾಲೀಕ ಮಹ್ಮದ್ ಹುಸೇನ್ ಶುಜ, ನೂರಾರು ಕೋಟಿ ಲಪಾಟಾಯಿಸಿದ್ದಾರೆ ಎಂದು ಅರೋಪಿಸಿ ಅಂಬೇಡ್ಕ‌ರ್ ಸೇನೆ ವತಿಯಿಂದ ದರ್ವೇಶ ಗ್ರೂಪ್ ಕಂಪನಿಯ ಮುಂದೆ ಪ್ರತಿಭಟನೆ ನಡೆಸಿದರು.

ಸರಕಾರ ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಹೋಬಳಿ ಕೇಂದ್ರ ಸ್ಥಾನದಲ್ಲಿ ಸರಕಾರಿ ಪದವಿ ಕಾಲೇಜ್ ಹಾಗೂ ಪದವಿ ಹಾಸ್ಟೆಲ್ ಮಂಜೂರಿ ಮಾಡಬೇಕು ಎಂದು ಪ್ರಗತಿಪರ ಸಮಘಟನೆಗಳ ಒಕ್ಕೂಟದಿಂದ ಒತ್ತಾಯಿಸಲಾಯಿತು.

ರಾಯಚೂರು ನಗರದ ಸಿಯಾತಲಾಬ್ ಬಡಾವಣೆಯಲ್ಲಿನ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಮರಿಚಿಕೆಯಾಗಿವೆ. ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ರಾಯಚೂರು ನಗರದ ಚಂದ್ರಬಂಡ ರಸ್ತೆಯಲ್ಲಿರುವ ಮಾಣಿಕೇಶ್ವರಿ ದೇವಸ್ಥಾನದಲ್ಲಿ ಗುರುಪೌರ್ಣಿಮೆ ಅಂಗವಾಗಿ 91ನೇ ಮಾತಾ ಮಾಣಿಕೇಶ್ವರಿ ಜಯಂತಿ ಆಚರಿಸಲಾಗುವುದು ಎಂದು ಮಾರೆಪ್ಪ ವಕೀಲರು ಅವರು ಹೇಳಿದರು.

ರಾಯಚೂರು ತಾಲೂಕಿನ ಶಕ್ತಿನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ, ಪತಂಜಲಿ ಯೋಗ ಸಮಿತಿ ವತಿಯಿಂದ, ಜುಲೈ 24 ರಿಂದ ಉಚಿತ ಯೋಗ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಶಿಭಿರಾರ್ಥಿಗಳು ಭಾಗವಹಿಸಲಿದ್ದು, ಜಿಲ್ಲೆಯ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

 

WhatsApp Group Join Now
Telegram Group Join Now
Share This Article