K2kannadanews.in
Attacke on KSTTC staff : ಶಕ್ತಿ ಯೋಜನೆ ಜಾರಿಯಾದಗಿನಿಂದ ಗಂಡ ಹೆಂಡತಿ ವಿಚಾರದ ಚಿತ್ರ ವಿಚಿತ್ರ ಘಟನೆಗಳು ಬೆಳಕಿಗೆ ಬರುತ್ತಿವೆ. ಅಂತದ್ಧೆ ಮತ್ತೊಂದು ಘಟನೆ ನಡೆದಿದೆ. ಪತ್ನಿ ಫ್ರೀ ಬಸ್ನಲ್ಲಿ ತವರಿಗೆ ಹೋಗಿದ್ದನ್ನು ಕಂಡು ಸಿಟ್ಟಿಗೆದ್ದ ಕುಡುಕ ಗಂಡ ಕೆಎಸ್ಆರ್ಟಿಸಿ (KSRTC) ಸಿಬ್ಬಂದಿ ಮೇಲೆ ಚಾಕು, ದೊಣ್ಣೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ (Bengalure Rural) ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನಲ್ಲಿ ನಡೆದಿದ್ದು. ಉಚಿತ ಬಸ್ (Free Bus) ಇದೆ ಎಂದು ತನಗೆ ಹೇಳದೆ, ಪತ್ನಿ ತವರಿಗೆ ಹೊಗಿದ್ದಾಳೆ ಎಂದು ನಾಗ ಎಂಬ ಚಿಕ್ಕಸಂದ್ರದ ವ್ಯಕ್ತಿ ಸಿಟ್ಟಿಗೆದ್ದು ರಂಪಾಟ ನಡೆಸಿದ್ದಾನೆ. ಮೊದಲು ಚಾಕು ಹಿಡಿದು ಹಲ್ಲೆ ನಡೆಸಲು ಯತ್ನಿಸಿದಾಗ ಸ್ಥಳೀಯರು ತಡೆದಿದ್ದಾರೆ. ಬಳಿಕ ದೊಣ್ಣೆ ಹಿಡಿದುಕೊಂಡು ಹಲ್ಲೆಗೆ ಮುಂದಾದಾಗ ಅಲ್ಲೇ ಇದ್ದ ವ್ಯಕ್ತಿಯೊಬ್ಬರು ನಾಗನನ್ನು ತಡೆದಿದ್ದಾರೆ ಎನ್ನಲಾಗುತ್ತಿದೆ.
[ays_poll id=3]