K2 ಕ್ರೈಂ ನ್ಯೂಸ್ : ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಗಂಭೀರ ಗಾಯಗೊಂಡ ಘಟನೆ ರಾಮನಗರದ ರಾಮದೇವರ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಹೌದು ಬೆಂಗಳೂರಿನ ಬೆಮೆಲ್ ಲೇಔಟ್ ನ ನಿವಾಸಿ ಇಶಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿರೋ ಯುವತಿ ಎಂದು ತಿಳಿದುಬಂದಿದೆ. ಏಕಾಂಗಿಯಾಗಿ ಬಂದು ಈಶ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿರೋ ಯುವತಿ ಎಂದು ತಿಳಿದುಬಂದಿದೆ.
ಬೆಟ್ಟದ ಮೇಲಿಂದ ಬಿದ್ದ ವೇಳೆ ಗಂಭೀರ ಗಾಯಗಳಾಗಿದ್ದು, ರಾಮನಗರದ ರಾಮದೇವರ ಬೆಟ್ಟದ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ಈ ವೇಳೆ ಗಂಭೀರವಾಗಿ ಗಾಯಗೊಂಡ ಯುವತಿಯನ್ನ ರಕ್ಷಿಸಿದ ಸ್ಥಳೀಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಪ್ರಮಾಣಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[ays_poll id=3]